ಬ್ರೇಕಿಂಗ್ ನ್ಯೂಸ್
04-01-21 03:07 pm Source: MYKHEL ಕ್ರೀಡೆ
ಸಿಡ್ನಿ: ಸಿಡ್ನಿ ಟೆಸ್ಟ್ಗೆ ದಿನಗಣನೆ ಆರಂಭವಾಗಿದ್ದು ಸೋಮವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾದ ಎಲ್ಲಾ ಆಟಗಾರರು ಮೆಲ್ಬರ್ನ್ನಿಂದ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ಕೊರೊನಾ ಪರೀಕ್ಷೆ ನಡೆದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿರುವುದು ನಿರಾಳತೆ ಮೂಡಿಸಿದೆ. ಈ ಮಧ್ಯೆ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಂಡದಿಂದ ಹೊರಬಿದ್ದಿದ್ದಾರೆ.
ಜನವರಿ 7ರಂದು ಮೂರನೇ ಟೆಸ್ಟ್ ಪಂದ್ಯ ನಡೆಯಲಿದ್ದು ಅದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಮ್ಮ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಪ್ಯಾಟಿನ್ಸನ್ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಜೇಮ್ಸ್ ಪ್ಯಾಟಿನ್ಸನ್ ಮೊದಲೆರಡು ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಜೋಶ್ ಹ್ಯಾಜಲ್ವುಡ್, ಪ್ಯಾಟ್ ಕಮ್ಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ಅವರಂತಾ ವೇಗದ ಬೌಲರ್ಗಳು ತಂಡದಲ್ಲಿರುವ ಕಾರಣ ಪ್ಯಾಟಿನ್ಸನ್ ಬೆಂಚ್ ಕಾಯಬೇಕಾಗಿತ್ತು. ಮತ್ತೊಂದೆಡೆ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ವೀಕ್ಷಕರ ವಿಚಾರದಲ್ಲೂ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶೇಕಡಾ 50 ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಬದಲಾಯಿಸಲಾಗಿದ್ದು ಶೇಕಡಾ 25 ರಷ್ಟು ಅಭಿಮಾನಿಗಳು ಮಾತ್ರವೇ ಆರಂಭದಲ್ಲಿ ಸಿಡ್ನಿ ಅಂಗಳಕ್ಕೆ ಅವಕಾಶ ನೀಡಲಾಗುತ್ತದೆ. ಸಿಡ್ನಿ ಕ್ರಿಕೆಟ್ ಮೈದಾನ 38,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದ್ದು 9500ರಷ್ಟು ಪ್ರೇಕ್ಷಕರು ಮಾತ್ರವೇ ಆರಂಭದಲ್ಲಿ ವೀಕ್ಷಣೆಗೆ ಅವಕಾಶವಿದೆ.
ನ್ಯೂಸೌತ್ ವೇಲ್ಸ್ ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಂಡಿದೆ. ಅದರ ಪರಿಣಾಮವಾಗಿ ವೀಕ್ಷಕರ ಸಂಖ್ಯೆಯಲ್ಲೂ ಖಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm