ಬ್ರೇಕಿಂಗ್ ನ್ಯೂಸ್
04-01-21 03:07 pm Source: MYKHEL ಕ್ರೀಡೆ
ಸಿಡ್ನಿ: ಸಿಡ್ನಿ ಟೆಸ್ಟ್ಗೆ ದಿನಗಣನೆ ಆರಂಭವಾಗಿದ್ದು ಸೋಮವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾದ ಎಲ್ಲಾ ಆಟಗಾರರು ಮೆಲ್ಬರ್ನ್ನಿಂದ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ಕೊರೊನಾ ಪರೀಕ್ಷೆ ನಡೆದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿರುವುದು ನಿರಾಳತೆ ಮೂಡಿಸಿದೆ. ಈ ಮಧ್ಯೆ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಂಡದಿಂದ ಹೊರಬಿದ್ದಿದ್ದಾರೆ.
ಜನವರಿ 7ರಂದು ಮೂರನೇ ಟೆಸ್ಟ್ ಪಂದ್ಯ ನಡೆಯಲಿದ್ದು ಅದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಮ್ಮ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಪ್ಯಾಟಿನ್ಸನ್ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಜೇಮ್ಸ್ ಪ್ಯಾಟಿನ್ಸನ್ ಮೊದಲೆರಡು ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಜೋಶ್ ಹ್ಯಾಜಲ್ವುಡ್, ಪ್ಯಾಟ್ ಕಮ್ಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ಅವರಂತಾ ವೇಗದ ಬೌಲರ್ಗಳು ತಂಡದಲ್ಲಿರುವ ಕಾರಣ ಪ್ಯಾಟಿನ್ಸನ್ ಬೆಂಚ್ ಕಾಯಬೇಕಾಗಿತ್ತು. ಮತ್ತೊಂದೆಡೆ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ವೀಕ್ಷಕರ ವಿಚಾರದಲ್ಲೂ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶೇಕಡಾ 50 ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಬದಲಾಯಿಸಲಾಗಿದ್ದು ಶೇಕಡಾ 25 ರಷ್ಟು ಅಭಿಮಾನಿಗಳು ಮಾತ್ರವೇ ಆರಂಭದಲ್ಲಿ ಸಿಡ್ನಿ ಅಂಗಳಕ್ಕೆ ಅವಕಾಶ ನೀಡಲಾಗುತ್ತದೆ. ಸಿಡ್ನಿ ಕ್ರಿಕೆಟ್ ಮೈದಾನ 38,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದ್ದು 9500ರಷ್ಟು ಪ್ರೇಕ್ಷಕರು ಮಾತ್ರವೇ ಆರಂಭದಲ್ಲಿ ವೀಕ್ಷಣೆಗೆ ಅವಕಾಶವಿದೆ.
ನ್ಯೂಸೌತ್ ವೇಲ್ಸ್ ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಂಡಿದೆ. ಅದರ ಪರಿಣಾಮವಾಗಿ ವೀಕ್ಷಕರ ಸಂಖ್ಯೆಯಲ್ಲೂ ಖಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am