ಬ್ರೇಕಿಂಗ್ ನ್ಯೂಸ್
04-01-21 03:07 pm Source: MYKHEL ಕ್ರೀಡೆ
ಸಿಡ್ನಿ: ಸಿಡ್ನಿ ಟೆಸ್ಟ್ಗೆ ದಿನಗಣನೆ ಆರಂಭವಾಗಿದ್ದು ಸೋಮವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾದ ಎಲ್ಲಾ ಆಟಗಾರರು ಮೆಲ್ಬರ್ನ್ನಿಂದ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ಕೊರೊನಾ ಪರೀಕ್ಷೆ ನಡೆದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿರುವುದು ನಿರಾಳತೆ ಮೂಡಿಸಿದೆ. ಈ ಮಧ್ಯೆ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಂಡದಿಂದ ಹೊರಬಿದ್ದಿದ್ದಾರೆ.
ಜನವರಿ 7ರಂದು ಮೂರನೇ ಟೆಸ್ಟ್ ಪಂದ್ಯ ನಡೆಯಲಿದ್ದು ಅದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಮ್ಮ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಪ್ಯಾಟಿನ್ಸನ್ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಜೇಮ್ಸ್ ಪ್ಯಾಟಿನ್ಸನ್ ಮೊದಲೆರಡು ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಜೋಶ್ ಹ್ಯಾಜಲ್ವುಡ್, ಪ್ಯಾಟ್ ಕಮ್ಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ಅವರಂತಾ ವೇಗದ ಬೌಲರ್ಗಳು ತಂಡದಲ್ಲಿರುವ ಕಾರಣ ಪ್ಯಾಟಿನ್ಸನ್ ಬೆಂಚ್ ಕಾಯಬೇಕಾಗಿತ್ತು. ಮತ್ತೊಂದೆಡೆ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ವೀಕ್ಷಕರ ವಿಚಾರದಲ್ಲೂ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶೇಕಡಾ 50 ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಬದಲಾಯಿಸಲಾಗಿದ್ದು ಶೇಕಡಾ 25 ರಷ್ಟು ಅಭಿಮಾನಿಗಳು ಮಾತ್ರವೇ ಆರಂಭದಲ್ಲಿ ಸಿಡ್ನಿ ಅಂಗಳಕ್ಕೆ ಅವಕಾಶ ನೀಡಲಾಗುತ್ತದೆ. ಸಿಡ್ನಿ ಕ್ರಿಕೆಟ್ ಮೈದಾನ 38,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದ್ದು 9500ರಷ್ಟು ಪ್ರೇಕ್ಷಕರು ಮಾತ್ರವೇ ಆರಂಭದಲ್ಲಿ ವೀಕ್ಷಣೆಗೆ ಅವಕಾಶವಿದೆ.
ನ್ಯೂಸೌತ್ ವೇಲ್ಸ್ ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಂಡಿದೆ. ಅದರ ಪರಿಣಾಮವಾಗಿ ವೀಕ್ಷಕರ ಸಂಖ್ಯೆಯಲ್ಲೂ ಖಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm