ಬ್ರೇಕಿಂಗ್ ನ್ಯೂಸ್
04-01-21 03:07 pm Source: MYKHEL ಕ್ರೀಡೆ
ಸಿಡ್ನಿ: ಸಿಡ್ನಿ ಟೆಸ್ಟ್ಗೆ ದಿನಗಣನೆ ಆರಂಭವಾಗಿದ್ದು ಸೋಮವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾದ ಎಲ್ಲಾ ಆಟಗಾರರು ಮೆಲ್ಬರ್ನ್ನಿಂದ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ಕೊರೊನಾ ಪರೀಕ್ಷೆ ನಡೆದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿರುವುದು ನಿರಾಳತೆ ಮೂಡಿಸಿದೆ. ಈ ಮಧ್ಯೆ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಂಡದಿಂದ ಹೊರಬಿದ್ದಿದ್ದಾರೆ.
ಜನವರಿ 7ರಂದು ಮೂರನೇ ಟೆಸ್ಟ್ ಪಂದ್ಯ ನಡೆಯಲಿದ್ದು ಅದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಮ್ಮ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಪ್ಯಾಟಿನ್ಸನ್ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಜೇಮ್ಸ್ ಪ್ಯಾಟಿನ್ಸನ್ ಮೊದಲೆರಡು ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಜೋಶ್ ಹ್ಯಾಜಲ್ವುಡ್, ಪ್ಯಾಟ್ ಕಮ್ಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ಅವರಂತಾ ವೇಗದ ಬೌಲರ್ಗಳು ತಂಡದಲ್ಲಿರುವ ಕಾರಣ ಪ್ಯಾಟಿನ್ಸನ್ ಬೆಂಚ್ ಕಾಯಬೇಕಾಗಿತ್ತು. ಮತ್ತೊಂದೆಡೆ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ವೀಕ್ಷಕರ ವಿಚಾರದಲ್ಲೂ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶೇಕಡಾ 50 ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಬದಲಾಯಿಸಲಾಗಿದ್ದು ಶೇಕಡಾ 25 ರಷ್ಟು ಅಭಿಮಾನಿಗಳು ಮಾತ್ರವೇ ಆರಂಭದಲ್ಲಿ ಸಿಡ್ನಿ ಅಂಗಳಕ್ಕೆ ಅವಕಾಶ ನೀಡಲಾಗುತ್ತದೆ. ಸಿಡ್ನಿ ಕ್ರಿಕೆಟ್ ಮೈದಾನ 38,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದ್ದು 9500ರಷ್ಟು ಪ್ರೇಕ್ಷಕರು ಮಾತ್ರವೇ ಆರಂಭದಲ್ಲಿ ವೀಕ್ಷಣೆಗೆ ಅವಕಾಶವಿದೆ.
ನ್ಯೂಸೌತ್ ವೇಲ್ಸ್ ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಂಡಿದೆ. ಅದರ ಪರಿಣಾಮವಾಗಿ ವೀಕ್ಷಕರ ಸಂಖ್ಯೆಯಲ್ಲೂ ಖಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
This News Article is a Copy of MYKHEL
05-02-23 02:56 pm
HK News Desk
ಪ್ರಣಾಳಿಕೆ ಸಮಿತಿಗೆ ರಾಜಿನಾಮೆ ನೀಡಿಲ್ಲ, ನಮ್ಮಲ್ಲಿ...
04-02-23 10:17 pm
ಅಮಿತ್ ಷಾ ಸಿಡಿ ಎಕ್ಸ್ಪರ್ಟ್ ಇದ್ದಾರೆ, ಗುಜರಾತ್ ಉ...
04-02-23 05:51 pm
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತ ಗಾಯಕಿ ವಾಣಿ...
04-02-23 05:16 pm
ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್...
04-02-23 02:23 pm
06-02-23 04:04 pm
HK News Desk
ಬಾಂಗ್ಲಾದೇಶದಲ್ಲಿ 14 ಹಿಂದು ದೇವಾಲಯಗಳ ಧ್ವಂಸ; ರಾತ್...
06-02-23 10:53 am
ನಸುಕಿನಲ್ಲಿ ಭೀಕರ ಭೂಕಂಪ ; ತತ್ತರಿಸಿದ ಟರ್ಕಿ, ಸಿರಿ...
06-02-23 10:44 am
ಮರಣದಂಡನೆಗೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್...
05-02-23 02:16 pm
ಫೆ.6ರಂದು ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಹೆಲಿಕಾಪ...
04-02-23 02:15 pm
06-02-23 05:39 pm
Mangalore Correspondent
ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ನಷ್ಟವೇ ಹೊರತು ಲ...
05-02-23 09:39 pm
ಜನಾರ್ದನ ಪೂಜಾರಿ ಮೂಲಕ ಟಿಕೆಟಿಗಾಗಿ ಒತ್ತಡ ತಂತ್ರ ;...
05-02-23 05:33 pm
ಟಯರ್ ಬ್ಲಾಸ್ಟ್ ; ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ಕ...
05-02-23 12:37 pm
ಕರಾಟೆ ಕ್ಲಾಸಿಗೆ ಬಂದಿದ್ದ ಬಾಲಕಿಗೆ ಕಿರುಕುಳ ; ಆರೋಪ...
04-02-23 10:24 pm
06-02-23 03:20 pm
Mangalore Correspondent
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm
ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ದೋಖಾ ; ಭಾರೀ ಲಾಭ ತೋರ...
05-02-23 05:26 pm
ಧೂಳೆಬ್ಬಿಸಿ ಹೋಗಬೇಡ ಎಂದು ಹೇಳಿದ್ದಕ್ಕೆ ಟಿಪ್ಪರ್ ಹಾ...
03-02-23 11:38 pm
ಪದ್ಮಾ ರಾಯಲ್ ಚಾಲೆಂಜ್ ಸ್ಕೀಮ್ ಹೆಸರಲ್ಲಿ ನೂರಾರು ಮಂ...
03-02-23 08:42 pm