ಬ್ರೇಕಿಂಗ್ ನ್ಯೂಸ್
04-01-21 03:19 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ವಿವಾದಕ್ಕೆ ಗುರಿಯಾಗಿದ್ದರು. ರೋಹಿತ್ ಶರ್ಮಾ ರಿಷಭ್ ಪಂತ್ ಸೇರಿದಂತೆ ಐವರು ಆಟಗಾರರು ಜೈವಿಕ ಸುರಕ್ಷತಾ ವಲಯವನ್ನು ಬೇಧಿಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿತ್ತು. ಈ ಮಧ್ಯೆ ಟೀಮ್ ಇಂಡಿಯಾ ಎಲ್ಲಾ ಆಟಗಾರರ ಕೊರೊನಾ ವೈರಸ್ ಪರೀಕ್ಷೆಯ ವರದಿ ಬಂದಿದ್ದು ಎಲ್ಲಾ ಆಟಗಾರರ ವರದಿಯೂ ನೆಗೆಟಿವ್ ಬಂದಿದೆ.
ಭಾನುವಾರ ಟೀಮ್ ಇಂಡಿಯಾದ ಆಟಗಾರರು ಹಾಗೂ ಸಿಬ್ಬಂಧಿಗಳ ಕೊವಿಡ್ ಪರೀಕ್ಷೆಯನ್ನು ನಡೆಸಲಾಗಿತ್ತು. ಇದರಲ್ಲಿ ಜೈವಿಕ ವಲಯ ಬೇಧಿಸಿರುವ ಅನುಮಾನಗಳಿರುವ ಆಟಗಾರರಾದ ರೋಹಿತ್ ಶರ್ಮಾ, ರಿಷಭ್ ಪಂತ್, ಶುಭ್ಮನ್ ಗಿಲ್, ನವ್ದೀಪ್ ಸೈನಿ ಹಾಗೂ ಪೃಥ್ವಿ ಶಾ ವರದಿಯೂ ಸೇರಿದ್ದು ಎಲ್ಲರೂ ಕೊರೊನಾ ವೈರಸ್ ನೆಗೆಟಿವ್ ವರದಿಯನ್ನು ಹೊಂದಿದ್ದಾರೆ.
ಮೆಲ್ಬರ್ನ್ನ ಹೋಟೆಲ್ನಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು ಆಹಾರವನ್ನು ಸೇವಿಸುತ್ತಿದ್ದ ವಿಚಾರವಾಗಿ ಅನಗತ್ಯ ವಿವಾದವೊಂದು ಎದ್ದಿತ್ತು. ಅಭಿಮಾನಿಯೋರ್ವ ಟ್ವಿಟ್ಟರ್ನಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು ಸೇವಿಸಿದ ಆಹಾರದ ಹೋಟೆಲ್ ಬಿಲ್ಅನ್ನು ಪಾವತಿಸಿರುವುದಾಗಿಯೂ ಹಾಗೂ ರಿಷಬ್ ಪಂತ್ ತನ್ನನ್ನು ತಬ್ಬಿಕೊಂಡಿಉವುದಾಗಿಯೂ ಟ್ವೀಟರ್ನಲ್ಲಿ ಬರೆದುಕೊಂಡಿದ್ದ. ಇದು ಕೊರೊನಾ ವೈರಸ್ ಜೈವಿಕ ವಲಯವನ್ನು ಬೇಧಿಸಿ ಆರೋಪಕ್ಕೆ ಕಾರಣವಾಗಿದೆ.
ಈ ಆರೋಪವನ್ನು ಟೀಮ್ ಇಂಡಿಯಾ ತಳ್ಳಿ ಹಾಕಿದೆ. ಆದರೆ ವಿವಾದಕ್ಕೆ ಕಾರಣವಾದ ಅಭಿಮಾನಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು ರಿಷಭ್ ಪಂತ್ ತನ್ನನ್ನು ತಬ್ಬಿಕೊಂಡಿಲ್ಲ. ಉತ್ಸಾಹದಲ್ಲಿ ಆ ರೀತಿ ಸಾಮಾಜಿಕ ಜಾಲತಾಣದಲ್ಲಿ ನರೆದುಕೊಂಡಿದ್ದೆ. ನಾವು ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿದ್ದೆವು. ಆಗಿರುವ ಸಂವಹನ ಕೊರತೆಗೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾನೆ.
ಆದರೆ ಟೀಮ್ ಇಂಡಿಯಾದ ಐವರು ಆಟಗಾರರನ್ನು ಸದ್ಯ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತ್ಯೇಕವಾಗಿರಿಸಿಕೊಳ್ಳಲಾಗಿದೆ. ಪ್ರಯಾಣದ ಸಂದರ್ಭದಲ್ಲಿ ಹಾಗೂ ತರಬೇತಿಯ ಸ್ಥಳದಲ್ಲೂ ಈ ಐವರು ಆಟಗಾರರು ಭಾರತೀಯ ಹಾಗೂ ಆಸ್ಟ್ರೇಲಿಯಾ ಆಟಗಾರರಿಂದ ಬೇರ್ಪಡಲಿದ್ದಾರೆ.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm