ಬ್ರೇಕಿಂಗ್ ನ್ಯೂಸ್
05-01-21 04:55 pm Source: MYKHEL Madhukara Shetty ಕ್ರೀಡೆ
ಮಾಜಿ ಕ್ರಿಕೆಟಿಗ ಪಶ್ಚಿಮ ಬಂಗಾಳದ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ತೃಣಮೂಲ ಕಾಂಗ್ರೇಸ್ನ ಮುಖಂಡ ಲಕ್ಷ್ಮಿ ರತನ್ ಶುಕ್ಲ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಸದ್ಯ ಈ ರಾಜೀನಾಮೆಗೆ ಅಧಿಕೃತವಾಗಿ ಯಾವುದೇ ಕಾರಣಗಳು ಲಭ್ಯವಾಗಿಲ್ಲ.
ಇದೇ ಸಂದರ್ಭದಲ್ಲಿ ಅವರು ಪಶ್ಚಿಮ ಬಂಗಾಳದ ಹೌರಾ ಜಿಲ್ಲಾ ತೃಣಮೂಲ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಟಿಎಂಸಿಯ ಶಾಸಕನಾಗಿ ಲಕ್ಷ್ಮೀ ರತನ್ ಶುಕ್ಲ ಮುಂದುವರಿಯಲು ಬಯಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಲ್ಲಟಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಅಧಿಕಾರದಲ್ಲಿರುವ ತೃಣಮೂಲಕ ಕಾಂಗ್ರೆಸ್ನ ಹಲವು ಪ್ರಮುಖ ನಾಯಕರು ರಾಜೀನಾಮೆಯನ್ನು ಸಲ್ಲಿಸಿದ್ದು ಬಿಜೆಪಿ ಪಾಳಯಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ಲಕ್ಷ್ಮೀ ರತನ್ ಶುಕ್ಲ ಅವರ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 39ರ ಹರೆಯದ ಲಕ್ಷ್ಮಿ ರತನ್ ಶುಕ್ಲ 1999ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಆದರೆ ಇವರ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಕೇವಲ ಮೂರು ಪಂದ್ಯಗಳಿಗಷ್ಟೇ ಸೀಮಿತವಾಯಿತು. ಆದರೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಶುಕ್ಲ 2015ರ ವರೆಗೂ ಸಕ್ರಿಯವಾಗಿದ್ದರು. ಐಪಿಎಲ್ನಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 47 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm