ಬ್ರೇಕಿಂಗ್ ನ್ಯೂಸ್
05-01-21 04:55 pm Source: MYKHEL Madhukara Shetty ಕ್ರೀಡೆ
ಮಾಜಿ ಕ್ರಿಕೆಟಿಗ ಪಶ್ಚಿಮ ಬಂಗಾಳದ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ತೃಣಮೂಲ ಕಾಂಗ್ರೇಸ್ನ ಮುಖಂಡ ಲಕ್ಷ್ಮಿ ರತನ್ ಶುಕ್ಲ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಸದ್ಯ ಈ ರಾಜೀನಾಮೆಗೆ ಅಧಿಕೃತವಾಗಿ ಯಾವುದೇ ಕಾರಣಗಳು ಲಭ್ಯವಾಗಿಲ್ಲ.
ಇದೇ ಸಂದರ್ಭದಲ್ಲಿ ಅವರು ಪಶ್ಚಿಮ ಬಂಗಾಳದ ಹೌರಾ ಜಿಲ್ಲಾ ತೃಣಮೂಲ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಟಿಎಂಸಿಯ ಶಾಸಕನಾಗಿ ಲಕ್ಷ್ಮೀ ರತನ್ ಶುಕ್ಲ ಮುಂದುವರಿಯಲು ಬಯಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಲ್ಲಟಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಅಧಿಕಾರದಲ್ಲಿರುವ ತೃಣಮೂಲಕ ಕಾಂಗ್ರೆಸ್ನ ಹಲವು ಪ್ರಮುಖ ನಾಯಕರು ರಾಜೀನಾಮೆಯನ್ನು ಸಲ್ಲಿಸಿದ್ದು ಬಿಜೆಪಿ ಪಾಳಯಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ಲಕ್ಷ್ಮೀ ರತನ್ ಶುಕ್ಲ ಅವರ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 39ರ ಹರೆಯದ ಲಕ್ಷ್ಮಿ ರತನ್ ಶುಕ್ಲ 1999ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಆದರೆ ಇವರ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಕೇವಲ ಮೂರು ಪಂದ್ಯಗಳಿಗಷ್ಟೇ ಸೀಮಿತವಾಯಿತು. ಆದರೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಶುಕ್ಲ 2015ರ ವರೆಗೂ ಸಕ್ರಿಯವಾಗಿದ್ದರು. ಐಪಿಎಲ್ನಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 47 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.
This News Article is a Copy of MYKHEL
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
23-12-25 03:28 pm
HK News Desk
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
23-12-25 10:51 pm
Mangalore Correspondent
Sansad Khel Mahotsav Mangalore: ಮಂಗಳೂರಿನಲ್ಲಿ...
23-12-25 10:40 pm
Ullal, UT Khader, Mudipu KSRTC: ನಾಲೇಜ್ ಕಾರಿಡಾ...
23-12-25 10:23 pm
Mangalore Murder, Crime, Court: ಕೊಲೆ ಮಾಡಿದ್ದು...
23-12-25 10:12 pm
DGP Alok Kumar, Mangalore Jail: ಮಂಗಳೂರು ಜೈಲಿಗ...
23-12-25 10:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm