ಬ್ರೇಕಿಂಗ್ ನ್ಯೂಸ್
05-01-21 04:59 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಲಘು ಹೃದಯಾಘಾತದಿಂದ ಕೊಲ್ಕತ್ತಾದ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಸೌರವ್ ಗಂಗೂಲಿ ದಾಖಲಾಗಿರುವ ವುಡ್ಲ್ಯಾಂಡ್ಸ್ ಆಸ್ಪತ್ರೆಗೆ ದೇಶದ ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಭೇಟಿ ನೀಡಿ ಸೌರವ್ ಗಂಗೂಲಿಯನ್ನು ಪರೀಕ್ಷಿಸಿದ್ದಾರೆ.
ಆ ಬಳಿಕ ಮಾತನಾಡಿದ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಬುಧವಾರ ಅವರು ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಲಿದ್ದು ತಮ್ಮ ನಿವಾಸಕ್ಕೆ ಮರಳಲಿದ್ದಾರೆ ಎಂದು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಮಾಹಿತಿ ನೀಡಿದ್ದಾರೆ.
ಇದೀ ಸಂದರ್ಭದಲ್ಲಿ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಮುಖ್ಯಸ್ಥೆ ಡಾ. ರೂಪಾಲಿ ಬಸು ಬುಧವಾರ ಸೌರವ್ ಗಂಗೂಲಿ ತಮ್ಮ ನಿವಾಸಕ್ಕೆ ಮರಳಲಿದ್ದು ಅದಾದ ಬಳಿಕವೂ ಅವರ ಆರೋಗ್ಯದ ಮೇಲೆ ನಿತ್ಯವೂ ವೈದ್ಯರು ನಿಗಾ ವಹಿಸಲಿದ್ದಾರೆ. ಮುಂದಿನ ಎರಡು ಮೂರು ವಾರಗಳಲ್ಲಿ ಸೌರವ್ ಗಂಗೂಲಿ ಮುಂದಿನ ವೈದ್ಯಕೀಯ ಕ್ರಮಗಳಿಗೆ ಸಿದ್ಧರಾಗಲಿದ್ದಾರೆ ಎಂದಿದ್ದಾರೆ. ಸೋಮವಾರ ಕೇಂದ್ರ ಸಚಿವ ಅನುರಾಗ್ ಠಾಕೂರ್ ವುಡ್ಲ್ಯಾಂಡ್ಸ್ ಆಸ್ಪತ್ರೆಗೆ ಭೆಟಿ ನೀಡಿ ಸೌರವ್ ಗಂಗೂಲಿಯವರ ಆರೋಗ್ಯವನ್ನು ವಿಚಾರಿಸಿದ್ದರು. ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ರಾಜ್ಯಸಭಾ ಸದಸ್ಯ ಸ್ವಪ್ನ್ ದಾಸ್ ಗುಪ್ತ, ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಕ್ ಮನ್ನನ್ ಕೂಡ ಆಸ್ಪತ್ರೆಗೆ ಭೆಟಿ ನೀಡಿದ್ದರು.
ಇದಕ್ಕೂ ಮುನ್ನ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸೌರವ್ ಗಂಗೂಲಿ ಜೊತೆಗೆ ಮಾತನಾಡಿದ್ದು ಶೀಘ್ರ ಚೇತರಿಕೆಗೆ ಶುಭ ಹಾರೈಸಿದ್ದರು. ಬಳಿಕ ಪತ್ನಿ ಡೋನಾ ಗಂಗೂಲಿ ಜೊತೆಗೂ ಪ್ರಧಾನಿ ಮಾತನಾಡಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ ಮನೆಯ ಜಿಮ್ನಲ್ಲಿದ್ದ ಸಂದರ್ಭದಲ್ಲಿ ಸೌರವ್ ಗಂಗೂಲಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದೇ ಅವರಿಗೆ ಆ್ಯಂಜಿಯೋಪ್ಲಾಸ್ಟಿಯನ್ನು ಕೂಡ ನಡೆಸಲಾಯಿತು.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm