ಬ್ರೇಕಿಂಗ್ ನ್ಯೂಸ್
05-01-21 04:59 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಲಘು ಹೃದಯಾಘಾತದಿಂದ ಕೊಲ್ಕತ್ತಾದ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಸೌರವ್ ಗಂಗೂಲಿ ದಾಖಲಾಗಿರುವ ವುಡ್ಲ್ಯಾಂಡ್ಸ್ ಆಸ್ಪತ್ರೆಗೆ ದೇಶದ ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಭೇಟಿ ನೀಡಿ ಸೌರವ್ ಗಂಗೂಲಿಯನ್ನು ಪರೀಕ್ಷಿಸಿದ್ದಾರೆ.
ಆ ಬಳಿಕ ಮಾತನಾಡಿದ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಬುಧವಾರ ಅವರು ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಲಿದ್ದು ತಮ್ಮ ನಿವಾಸಕ್ಕೆ ಮರಳಲಿದ್ದಾರೆ ಎಂದು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಮಾಹಿತಿ ನೀಡಿದ್ದಾರೆ.
ಇದೀ ಸಂದರ್ಭದಲ್ಲಿ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಮುಖ್ಯಸ್ಥೆ ಡಾ. ರೂಪಾಲಿ ಬಸು ಬುಧವಾರ ಸೌರವ್ ಗಂಗೂಲಿ ತಮ್ಮ ನಿವಾಸಕ್ಕೆ ಮರಳಲಿದ್ದು ಅದಾದ ಬಳಿಕವೂ ಅವರ ಆರೋಗ್ಯದ ಮೇಲೆ ನಿತ್ಯವೂ ವೈದ್ಯರು ನಿಗಾ ವಹಿಸಲಿದ್ದಾರೆ. ಮುಂದಿನ ಎರಡು ಮೂರು ವಾರಗಳಲ್ಲಿ ಸೌರವ್ ಗಂಗೂಲಿ ಮುಂದಿನ ವೈದ್ಯಕೀಯ ಕ್ರಮಗಳಿಗೆ ಸಿದ್ಧರಾಗಲಿದ್ದಾರೆ ಎಂದಿದ್ದಾರೆ. ಸೋಮವಾರ ಕೇಂದ್ರ ಸಚಿವ ಅನುರಾಗ್ ಠಾಕೂರ್ ವುಡ್ಲ್ಯಾಂಡ್ಸ್ ಆಸ್ಪತ್ರೆಗೆ ಭೆಟಿ ನೀಡಿ ಸೌರವ್ ಗಂಗೂಲಿಯವರ ಆರೋಗ್ಯವನ್ನು ವಿಚಾರಿಸಿದ್ದರು. ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ರಾಜ್ಯಸಭಾ ಸದಸ್ಯ ಸ್ವಪ್ನ್ ದಾಸ್ ಗುಪ್ತ, ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಕ್ ಮನ್ನನ್ ಕೂಡ ಆಸ್ಪತ್ರೆಗೆ ಭೆಟಿ ನೀಡಿದ್ದರು.
ಇದಕ್ಕೂ ಮುನ್ನ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸೌರವ್ ಗಂಗೂಲಿ ಜೊತೆಗೆ ಮಾತನಾಡಿದ್ದು ಶೀಘ್ರ ಚೇತರಿಕೆಗೆ ಶುಭ ಹಾರೈಸಿದ್ದರು. ಬಳಿಕ ಪತ್ನಿ ಡೋನಾ ಗಂಗೂಲಿ ಜೊತೆಗೂ ಪ್ರಧಾನಿ ಮಾತನಾಡಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ ಮನೆಯ ಜಿಮ್ನಲ್ಲಿದ್ದ ಸಂದರ್ಭದಲ್ಲಿ ಸೌರವ್ ಗಂಗೂಲಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದೇ ಅವರಿಗೆ ಆ್ಯಂಜಿಯೋಪ್ಲಾಸ್ಟಿಯನ್ನು ಕೂಡ ನಡೆಸಲಾಯಿತು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm