ಬ್ರೇಕಿಂಗ್ ನ್ಯೂಸ್
06-01-21 03:00 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂದಿನ ಐಪಿಎಲ್ ಆಯೋಜನೆಗೆ ಸಿದ್ಧತೆ ಆರಂಭಿಸಿದೆ. ಮುಂಬೈ ಮಿರರ್ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದ್ದು ಐಪಿಎಲ್ ಆಡಳಿತ ಮಂಡಳಿ ಜನವರಿ 4ರಂದು ಮಂಗಳವಾರ ಸಭೆ ಸೇರಿದ್ದು 2021ರ ಐಪಿಎಲ್ಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದೆ ಎನ್ನಲಾಗಿದೆ.
ಈ ವರದಿಯ ಪ್ರಕಾರ ಹರಾಜು ಪ್ರಕ್ರಿಯೆಗೂ ಮುನ್ನ ಬಿಸಿಸಿಐ ವಹಿವಾಟು ನಡೆಸಲು ಬಾಗಿಲು ತೆರೆದಿದ್ದು ಜನವರಿ 21ರ ಒಳಗೆ ಆಟಗಾರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಫೆಬ್ರವರಿ 11 ರಂದು ಮಿನಿ ಹರಾಜು ನಡೆಸುವ ತಾತ್ಕಾಲಿಕ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ಇದೇ ವರದಿ ಹೇಳುತ್ತಿದೆ.
ಪೂರ್ವ ನಿಗದಿಯ ಪ್ರಕಾರ ಈ ವರ್ಷದಲ್ಲಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದ ಆವೃತ್ತಿ ಆರು ತಿಂಗಳು ತಡವಾಗಿ ಆರಂಭವಾಗಿತ್ತು. ಹೀಗಾಗಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆಯನ್ನು ಕೈ ಬಿಟ್ಟು ಮಿನಿ ಹರಾಜು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಈ ಬಾರಿ ಆಯೋಜನೆ ಮಾಡಲಾಗುತ್ತಿದೆ. ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ರಣಜಿ ಟ್ರೋಫಿಗೂ ಮುನ್ನ ಈ ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಈ ದೇಶೀಯ ಕ್ರಿಕೆಟ್ ಟೂರ್ನಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.
ಇನ್ನು ಮುಂದಿನ ಆವೃತ್ತಿಯ ಆಯೋಜನೆಗೆ ಭಾರತವೇ ಮೊದಲನೇ ಆಯ್ಕೆಯಾಗಿದೆ. ಆದರೆ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ಸವಾಲನ್ನು ಎದುರಿಸಲು ಸಜ್ಜಾಗಿದೆ. ಹಾಗಾಗಿ ಯುಎಇಯನ್ನು 14ನೇ ಆವೃತ್ತಿಯ ಐಪಿಎಲ್ ಆಯೋಜನೆಗೂ ಮೀಸಲು ಇಡಲಾಗಿದೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm