ಬ್ರೇಕಿಂಗ್ ನ್ಯೂಸ್
06-01-21 03:00 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂದಿನ ಐಪಿಎಲ್ ಆಯೋಜನೆಗೆ ಸಿದ್ಧತೆ ಆರಂಭಿಸಿದೆ. ಮುಂಬೈ ಮಿರರ್ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದ್ದು ಐಪಿಎಲ್ ಆಡಳಿತ ಮಂಡಳಿ ಜನವರಿ 4ರಂದು ಮಂಗಳವಾರ ಸಭೆ ಸೇರಿದ್ದು 2021ರ ಐಪಿಎಲ್ಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದೆ ಎನ್ನಲಾಗಿದೆ.
ಈ ವರದಿಯ ಪ್ರಕಾರ ಹರಾಜು ಪ್ರಕ್ರಿಯೆಗೂ ಮುನ್ನ ಬಿಸಿಸಿಐ ವಹಿವಾಟು ನಡೆಸಲು ಬಾಗಿಲು ತೆರೆದಿದ್ದು ಜನವರಿ 21ರ ಒಳಗೆ ಆಟಗಾರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಫೆಬ್ರವರಿ 11 ರಂದು ಮಿನಿ ಹರಾಜು ನಡೆಸುವ ತಾತ್ಕಾಲಿಕ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ಇದೇ ವರದಿ ಹೇಳುತ್ತಿದೆ.
ಪೂರ್ವ ನಿಗದಿಯ ಪ್ರಕಾರ ಈ ವರ್ಷದಲ್ಲಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದ ಆವೃತ್ತಿ ಆರು ತಿಂಗಳು ತಡವಾಗಿ ಆರಂಭವಾಗಿತ್ತು. ಹೀಗಾಗಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆಯನ್ನು ಕೈ ಬಿಟ್ಟು ಮಿನಿ ಹರಾಜು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಈ ಬಾರಿ ಆಯೋಜನೆ ಮಾಡಲಾಗುತ್ತಿದೆ. ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ರಣಜಿ ಟ್ರೋಫಿಗೂ ಮುನ್ನ ಈ ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಈ ದೇಶೀಯ ಕ್ರಿಕೆಟ್ ಟೂರ್ನಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.
ಇನ್ನು ಮುಂದಿನ ಆವೃತ್ತಿಯ ಆಯೋಜನೆಗೆ ಭಾರತವೇ ಮೊದಲನೇ ಆಯ್ಕೆಯಾಗಿದೆ. ಆದರೆ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ಸವಾಲನ್ನು ಎದುರಿಸಲು ಸಜ್ಜಾಗಿದೆ. ಹಾಗಾಗಿ ಯುಎಇಯನ್ನು 14ನೇ ಆವೃತ್ತಿಯ ಐಪಿಎಲ್ ಆಯೋಜನೆಗೂ ಮೀಸಲು ಇಡಲಾಗಿದೆ.
This News Article is a Copy of MYKHEL
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm