ಬ್ರೇಕಿಂಗ್ ನ್ಯೂಸ್
07-01-21 05:03 pm Source: MYKHEL Madhukara Shetty ಕ್ರೀಡೆ
ಐಪಿಎಲ್ನ 14ನೇ ಆವೃತ್ತಿ ಇನ್ನೇನು ಮೂರ್ನಾಲ್ಕು ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ಐಪಿಎಲ್ ತಂಡಗಳ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸೋಮವಾರ ಐಪಿಎಲ್ ಆಡಳಿತ ಮಂಡಳಿಯ ಸಭೆ ನಡೆದಿದ್ದು ಫೆಬ್ರವರಿ 11ರಂದು ಮಿನಿ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.
ಸೋಮವಾರ ವರ್ಚುವಲ್ ವೇದಿಕೆಯಲ್ಲಿ ನಡೆದ ಮೀಟಿಂಗ್ನಲ್ಲಿ ಖಚಿತ ದಿನಾಂಕ ಹಾಗೂ ಐಪಿಎಲ್ ಆಯೋಜನೆಯ ಸ್ಥಳದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಆದರೆ ಈ ಬಾರಿಯ ಐಪಿಎಲ್ನಲ್ಲಿ ಈ ಹಿಂದಿನ ಆವೃತ್ತಿಯಂತೆ 8 ತಂಡಗಳು ಮಾತ್ರವೇ ಪಾಲ್ಗೊಳ್ಳಲಿದೆ ಎಂಬ ಖಚಿತ ನಿರ್ಧಾರವನ್ನು ಈ ಹಿಂದೆಯೇ ತೆಗೆದುಕೊಳ್ಳಲಾಗಿತ್ತು.
ಫೆಬ್ರವರಿ ತಿಂಗಳ ಮೊದಲ ವಾರದಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಹಾಗೂ ಎರಡನೇ ಟೆಸ್ಟ್ನ ವಿರಾಮದ ಸಂದರ್ಭದಲ್ಲಿ ಮಿನಿ ಹರಾಜು ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಾಗಾದರೆ ಈ ಹರಾಜು ಪ್ರಕ್ರಿಯೆಯ ನಿಯಮಗಳೇನು? ಯಾವ ಆಟಗಾರರು ವರ್ಗಾವಣೆಗೆ ಅರ್ಹರಾಗಿರುತ್ತಾರೆ?

ಆಟಗಾರರ ವರ್ಗಾವಣೆ ನಿಯಮ
ಐಪಿಎಲ್ನಲ್ಲಿನ ಹೊಸ ನಿಯಮದ ಪ್ರಕಾರ ಫ್ರಾಂಚೈಸಿಗಳು ಆಂತರಿಕವಾಗಿ ಕ್ಯಾಪ್ಡ್ ಅಥವಾ ಅನ್ಕ್ಯಾಪ್ಡ್ ಆಟಗಾರರನ್ನು ಬದಲಾಯಿಸಿಕೊಲ್ಳುವ ಅವಕಾಶವನ್ನು ನೀಡಲಾಗಿದೆ. ಈ ಹಿಂದೆ ಕೇವಲ ಅನ್ಕ್ಯಾಪ್ಡ್ ಅಂದರೆ ಆಡದ ಆಟಗಾರರನ್ನು ಮಾತ್ರವೇ ವರ್ಗಾವಣೆ ಮಾಡುವ ಅವಕಾಶವಿತ್ತು.

ತಂಡದ ಪರ್ಸ್ನಲ್ಲಿ ಉಳಿದಿರುವ ಮೊತ್ತ
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಈಗ ಕೇವಲ 0.15 ಕೋಟಿ ಮಾತ್ರವೇ ಬಾಕಿ ಉಳಿದುಕೊಂಡಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 16.5 ಕೋಟಿ ಮೊತ್ತವನ್ನು ಹೊಂದಿದ್ದು ಹೆಚ್ಚಿನ ಮೊತ್ತವನ್ನು ಉಳಿಸಿಕೊಂಡಿರುವ ತಂಡವಾಗಿದೆ. ರಾಜಸ್ಥಾನ ರಾಯಲ್ಸ್(14.75 ಕೋಟಿ), ಸನ್ರೈಸರ್ಸ್ ಹೈದರಾಬಾದ್ (10.1ಕೋಟಿ) ಡೆಲ್ಲಿ ಕ್ಯಾಪಿಟಲ್ಸ್ (9 ಕೋಟಿ), ಕೊಲ್ಕತ್ತಾ ನೈಟ್ ರೈಡರ್ಸ್(8.5 ಕೋಟಿ) ರಾಯಲ್ ಚಾಲೆಂಜರ್ಸ್ ಬೆಂಗಳೂರು (6.4 ಕೋಟಿ) ಮುಂಬೈ ಇಂಡಿಯನ್ಸ್(1.95 ಕೋಟಿ)

ಐಪಿಎಲ್ 2021 ಶೆಡ್ಯೂಲ್
ಐಪಿಎಲ್ನ 14ನೇ ಆವೃತ್ತಿ ಮಾರ್ಚ್ ಅಂತ್ಯಕ್ಕೆ ಆರಂಭವಾಗಿ ಮೇ ಮಧ್ಯಭಾಗದಲ್ಲಿ ಅಂತ್ಯವಾಗುವ ನಿರೀಕ್ಷೆಯಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಬಾರಿಯ ಐಪಿಎಲ್ ಆವೃತ್ತಿಯನ್ನು ಭಾರತದಲ್ಲೇ ಆಯೋಜಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯ ಐಪಿಎಲ್ ಆವೃತ್ತಿ ಕೊರೊನಾ ವೈರಸ್ನ ಕಾರಣದಿಂದಾಗಿ ಯುಎಇನಲ್ಲಿ ಆಯೋಜನೆಯಾಗಿತ್ತು. ಕೊರೊನಾ ವೈರಸ್ನ ತೀವ್ರತೆ ಕಡಿಮೆಯಾಗದಿದ್ದಲ್ಲಿ ಈ ಬಾರಿಯೂ ಯುಎಇನಲ್ಲೆ ಐಪಿಎಲ್ ಆಯೋಜನೆಯಾಗುವ ಸಂಭವವಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm