ಬ್ರೇಕಿಂಗ್ ನ್ಯೂಸ್
07-01-21 05:03 pm Source: MYKHEL Madhukara Shetty ಕ್ರೀಡೆ
ಐಪಿಎಲ್ನ 14ನೇ ಆವೃತ್ತಿ ಇನ್ನೇನು ಮೂರ್ನಾಲ್ಕು ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ಐಪಿಎಲ್ ತಂಡಗಳ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸೋಮವಾರ ಐಪಿಎಲ್ ಆಡಳಿತ ಮಂಡಳಿಯ ಸಭೆ ನಡೆದಿದ್ದು ಫೆಬ್ರವರಿ 11ರಂದು ಮಿನಿ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.
ಸೋಮವಾರ ವರ್ಚುವಲ್ ವೇದಿಕೆಯಲ್ಲಿ ನಡೆದ ಮೀಟಿಂಗ್ನಲ್ಲಿ ಖಚಿತ ದಿನಾಂಕ ಹಾಗೂ ಐಪಿಎಲ್ ಆಯೋಜನೆಯ ಸ್ಥಳದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಆದರೆ ಈ ಬಾರಿಯ ಐಪಿಎಲ್ನಲ್ಲಿ ಈ ಹಿಂದಿನ ಆವೃತ್ತಿಯಂತೆ 8 ತಂಡಗಳು ಮಾತ್ರವೇ ಪಾಲ್ಗೊಳ್ಳಲಿದೆ ಎಂಬ ಖಚಿತ ನಿರ್ಧಾರವನ್ನು ಈ ಹಿಂದೆಯೇ ತೆಗೆದುಕೊಳ್ಳಲಾಗಿತ್ತು.
ಫೆಬ್ರವರಿ ತಿಂಗಳ ಮೊದಲ ವಾರದಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಹಾಗೂ ಎರಡನೇ ಟೆಸ್ಟ್ನ ವಿರಾಮದ ಸಂದರ್ಭದಲ್ಲಿ ಮಿನಿ ಹರಾಜು ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಾಗಾದರೆ ಈ ಹರಾಜು ಪ್ರಕ್ರಿಯೆಯ ನಿಯಮಗಳೇನು? ಯಾವ ಆಟಗಾರರು ವರ್ಗಾವಣೆಗೆ ಅರ್ಹರಾಗಿರುತ್ತಾರೆ?
ಆಟಗಾರರ ವರ್ಗಾವಣೆ ನಿಯಮ
ಐಪಿಎಲ್ನಲ್ಲಿನ ಹೊಸ ನಿಯಮದ ಪ್ರಕಾರ ಫ್ರಾಂಚೈಸಿಗಳು ಆಂತರಿಕವಾಗಿ ಕ್ಯಾಪ್ಡ್ ಅಥವಾ ಅನ್ಕ್ಯಾಪ್ಡ್ ಆಟಗಾರರನ್ನು ಬದಲಾಯಿಸಿಕೊಲ್ಳುವ ಅವಕಾಶವನ್ನು ನೀಡಲಾಗಿದೆ. ಈ ಹಿಂದೆ ಕೇವಲ ಅನ್ಕ್ಯಾಪ್ಡ್ ಅಂದರೆ ಆಡದ ಆಟಗಾರರನ್ನು ಮಾತ್ರವೇ ವರ್ಗಾವಣೆ ಮಾಡುವ ಅವಕಾಶವಿತ್ತು.
ತಂಡದ ಪರ್ಸ್ನಲ್ಲಿ ಉಳಿದಿರುವ ಮೊತ್ತ
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಈಗ ಕೇವಲ 0.15 ಕೋಟಿ ಮಾತ್ರವೇ ಬಾಕಿ ಉಳಿದುಕೊಂಡಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 16.5 ಕೋಟಿ ಮೊತ್ತವನ್ನು ಹೊಂದಿದ್ದು ಹೆಚ್ಚಿನ ಮೊತ್ತವನ್ನು ಉಳಿಸಿಕೊಂಡಿರುವ ತಂಡವಾಗಿದೆ. ರಾಜಸ್ಥಾನ ರಾಯಲ್ಸ್(14.75 ಕೋಟಿ), ಸನ್ರೈಸರ್ಸ್ ಹೈದರಾಬಾದ್ (10.1ಕೋಟಿ) ಡೆಲ್ಲಿ ಕ್ಯಾಪಿಟಲ್ಸ್ (9 ಕೋಟಿ), ಕೊಲ್ಕತ್ತಾ ನೈಟ್ ರೈಡರ್ಸ್(8.5 ಕೋಟಿ) ರಾಯಲ್ ಚಾಲೆಂಜರ್ಸ್ ಬೆಂಗಳೂರು (6.4 ಕೋಟಿ) ಮುಂಬೈ ಇಂಡಿಯನ್ಸ್(1.95 ಕೋಟಿ)
ಐಪಿಎಲ್ 2021 ಶೆಡ್ಯೂಲ್
ಐಪಿಎಲ್ನ 14ನೇ ಆವೃತ್ತಿ ಮಾರ್ಚ್ ಅಂತ್ಯಕ್ಕೆ ಆರಂಭವಾಗಿ ಮೇ ಮಧ್ಯಭಾಗದಲ್ಲಿ ಅಂತ್ಯವಾಗುವ ನಿರೀಕ್ಷೆಯಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಬಾರಿಯ ಐಪಿಎಲ್ ಆವೃತ್ತಿಯನ್ನು ಭಾರತದಲ್ಲೇ ಆಯೋಜಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯ ಐಪಿಎಲ್ ಆವೃತ್ತಿ ಕೊರೊನಾ ವೈರಸ್ನ ಕಾರಣದಿಂದಾಗಿ ಯುಎಇನಲ್ಲಿ ಆಯೋಜನೆಯಾಗಿತ್ತು. ಕೊರೊನಾ ವೈರಸ್ನ ತೀವ್ರತೆ ಕಡಿಮೆಯಾಗದಿದ್ದಲ್ಲಿ ಈ ಬಾರಿಯೂ ಯುಎಇನಲ್ಲೆ ಐಪಿಎಲ್ ಆಯೋಜನೆಯಾಗುವ ಸಂಭವವಿದೆ.
This News Article is a Copy of MYKHEL
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm