ಬ್ರೇಕಿಂಗ್ ನ್ಯೂಸ್
08-01-21 03:27 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ವಿಚಾರವಾಗಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಬ್ರಿಸ್ಬೇನ್ ಖ್ಯಾತ ಗಾಲೆ ಕ್ರೀಡಾಂಗಣದಲ್ಲಿ ನಾಲ್ಕನೇ ಟೆಸ್ಟ್ ನಡೆಸಿಯೇ ತೀರುವ ಇಂಗಿತ ಹೊಂದಿರುವ ಕ್ರಿಕೆಟ್ ಆಸ್ಟ್ರೇಲಿಯಾಗೆ ಮತ್ತೊಂದು ಕಂಟಕ ಉಂಟಾಗಿದೆ. ಸರ್ಕಾರ ಕ್ವೀನ್ಸ್ಲ್ಯಾಂಡ್ನಲ್ಲಿ ಕಠಿಣ ಲಾಕ್ಡೌನ್ ಘೋಷಿಸಿದ್ದು ಬ್ರಿಸ್ಬೇನ್ ಟೆಸ್ಟ್ ಪಂದ್ಯದ ಮೇಲೆ ಮತ್ತೊಂದು ಕರಿಛಾಯೆ ಮೂಡಿದಂತಾಗಿದೆ.
ಬ್ರಿಸ್ಬೇನ್ನಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿದೆ. ಹೀಗಾಗಿ ಕ್ವೀನ್ಸ್ಲ್ಯಾಂಡ್ ರಾಜ್ಯದಲ್ಲಿ ಕನಿಷ್ಠ ಮೂರು ದಿನಗಳ ಕಾಲ ಕಠಿಣ ಲಾಕ್ಡೌನ್ ಘೋಷಣೆಯಾಗಿದೆ. ಇದಕ್ಕೂ ಮೊದಲೇ ಬ್ರಿಸ್ಬೇನ್ನಲ್ಲಿ ಕಠಿಣ ಕ್ವಾರಂಟೈನ್ ನಿಯಮಗಳು ಇರುವ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಬ್ರಿಸ್ಬೇನ್ಗೆ ತೆರಳಲು ಹಿಂದೇಟು ಹಾಕುತ್ತಿದೆ ಎಂದು ವರದಿಯಾಗಿತ್ತು.
ಜನವರಿ 15ರಿಂದ ಆರಂಭವಾಗಲಿರುವ ಸರಣಿಯ ಅಂತಿಮ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಕ್ವೀನ್ಸ್ಲ್ಯಾಂಡ್ ಸರ್ಕಾರದ ಕಠಿಣ ಕ್ವಾರಂಟೈನ್ ಕಾರಣದಿಂದಾಗಿ ಗಾಲೆಯಲ್ಲಿ ಅಂತಿಮ ಪಂದ್ಯ ನಡೆಯದಿದ್ದಲ್ಲಿ ಮೂರನೇ ಪಂದ್ಯದ ಆತಿಥ್ಯವನ್ನು ವಹಿಸಿಕೊಂಡಿರುವ ಸಿಡ್ನಿ ಕ್ರಿಕೆಟ್ ಮೈದಾನದಲ್ಲೇ ಅಂತಿಮ ಪಂದ್ಯವೂ ನಡೆಯುವ ಸಾಧ್ಯತೆಯಿದೆ. ಬ್ರಿಸ್ಬೇನ್ನಲ್ಲಿ ಈಗ ನಿಗದಿಯಾಗಿರುವ ಲಾಕ್ಡೌನ್ ಅಂತ್ಯವಾದ ನಂತರ ಮುಂದಿನ ಮಂಗಳವಾರ ಎರಡು ತಂಡಗಳು ಕೂಡ ಬ್ರಿಸ್ಬೇನ್ಗೆ ತೆರಳಲು ದಿನಾಂಕ ನಿಗದಿಯಾಗಿದೆ. ಕ್ವಾರಂಟೈನಿ ಹೋಟೆಲ್ನಲ್ಲಿನ ಕ್ಲೀನರ್ ಓರ್ವ ಬ್ರಿಟನ್ನಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್ಗೆ ತುತ್ತಾಗಿರುವುದು ಬೆಳಕಿಗೆ ಬಂದಿದ್ದು ಕ್ವೀನ್ಸ್ಲ್ಯಾಂಡ್ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಕಾರಣವಾಗಿದೆ.
ಈ ಮಧ್ಯೆ ಬಲ್ಲ ಮಾಹಿತಿಯ ಪ್ರಕಾರ ಬಿಸಿಸಿಐ ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯಸ್ಥ ಅರ್ಲ್ ಎಡ್ಡಿಂಗ್ಸ್ಗೆ ಪತ್ರ ಬರೆದಿದ್ದು ಪ್ರವಾಸದ ವಿಧಾನಗಳು, ಕಠಿಣ ಕ್ವಾರಂಟೈನ್ ನಿಯಮಗಳ ಸಡಿಲಿಕೆಯ ಬಗ್ಗೆ ಬರೆಯಲಾಗಿದೆ ಎನ್ನಲಾಗಿದೆ. 'ಚರ್ಚೆಗಳು ಇನ್ನೂ ನಡೆಯುತ್ತಿವೆ ಆದರೆ ಇಂದು ಬಿಸಿಸಿಐ ತನ್ನ ಆಟಗಾರರಿಗೆ ಬ್ರಿಸ್ಬೇನ್ನಲ್ಲಿ ಪಂದ್ಯವನ್ನು ನಡೆಸಬೇಕಾದರೆ ಕಠಿಣ ಕ್ವಾರಂಟೈನ್ ಅನ್ನು ಸಡಿಲಿಸುವಂತೆ ಕೋರಿ ಔಪಚಾರಿಕವಾಗಿ ಪತ್ರವನ್ನು ಕಳುಹಿಸಿದೆ' ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm