ಬ್ರೇಕಿಂಗ್ ನ್ಯೂಸ್
08-01-21 03:32 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದರೆ. ಟೆಸ್ಟ್ ಕ್ರಿಕೆಟ್ನ 27ನೇ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಇನ್ನಿಂಗ್ಸ್ಗೆ ಆಸರೆಯಾದರು. ಈ ಮೂಲಕ ಆಸ್ಟ್ರೇಲಿಯಾ ಮುನ್ನೂರು ರನ್ಗಳ ಗಡಿಯನ್ನು ದಾಟಲು ಕಾರಣರಾದರು.
ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ನಲ್ಲಿ 131 ರನ್ಗಳ ಭರ್ಜರಿ ಪ್ರದರ್ಶನವನ್ನು ನೀಡಿದರು. ಈ ಮೂಲಕ ಮತ್ತಷ್ಟು ರನ್ ಆಸಿಸ್ ಪಡೆಯ ಖಾತೆಗೆ ಸೇರಿಸುವ ಉದ್ದೇಶವನ್ನಿಟ್ಟುಕೊಂಡಿದ್ದರು. ಆದರೆ ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಅದ್ಭುತವಾದ ಥ್ರೋ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಆಸಿಸ್ ಇನ್ನಿಂಗ್ಸ್ನ ಅಂತ್ಯಕ್ಕೆ ಕಾರಣರಾದರು.
ಸ್ಟೀವ್ ಸ್ಮಿತ್ 130 ರನ್ ಗಳಿಸಿದ್ದ ವೇಳೆ ಎರಡು ರನ್ ಗಳಿಸುವ ಪ್ರಯತ್ನವನ್ನು ನಡೆಸಿದ್ದರು. ಮೊದಲ ರನ್ಅನ್ನು ಯಶಸ್ವಿಯಾಗಿ ಪೂರೈಸಿ ಎರಡನೇ ರನ್ಗೆ ಓಟಕ್ಕಿತ್ತರು. ಈ ವೇಳೆ ಚೆಂಡು ಫೀಲ್ಡರ್ ರವೀಂದ್ರ ಜಡೇಜಾ ಕೈಗೆ ತಲುಪಿತ್ತು. ಜಡೇಜಾ ಚೆಂಡನ್ನು ನೇರವಾಗಿ ಗುರಿಯಿಟ್ಟು ಸ್ಟ್ರೈಕರ್ ತುದಿಯ ವಿಕೆಟ್ಗೆ ಎಸೆದರು. ಅದು ವಿಕೆಟ್ ಹಾರಿಸುವ ಮೂಲಕ ಸ್ಮಿತ್ ಅವರ ಅದ್ಭುತ ಇನ್ನಿಂಗ್ಸ್ ಅಂತ್ಯಗೊಳಿಸಿತು. ಅಲ್ಲಿಗೆ ಸ್ಮಿತ್ 131 ರನ್ ಗಳಿಸಿದ್ದರು. ಜಡೇಜಾ ಅವರ ಈ ಫೀಲ್ಡಿಂಗ್ಗೆ ಅಭಿಮಾನಿಗಳು ಮನಸೋತಿದ್ದು ಟ್ವಿಟ್ಟರ್ನಲ್ಲಿ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದೆ.
ರವೀಂದ್ರ ಜಡೇಜಾ ಸ್ಟೀವ್ ಸ್ಮಿತ್ ಅವರನ್ನು ರನೌಟ್ ಮಾಡುವ ಮುನ್ನ ಬೌಲಿಂಗ್ನಲ್ಲೂ ಭಾರತಕ್ಕೆ ಉತ್ತಮ ಯಶಸ್ಸನ್ನು ನೀಡಿದರು. ಟೀಮ್ ಇಂಡಿಯಾ ಪರವಾಗಿ ಜಡೇಜಾ ಆಸ್ಟ್ರೇಲಿಯಾದ 4 ವಿಕೆಟ್ ಕಿತ್ತಿದ್ದಾರೆ. ಮೊದಲ ದಿನದಾಟದಲ್ಲಿ ಬೌಲಿಂಗ್ ಮಾಡಲು ಜಡೇಜಾ ಹೆಚ್ಚಿನ ಅವಕಾಶವನ್ನು ಪಡೆದಿರಲಿಲ್ಲ. ಎರಡನೇ ದಿನದಲ್ಲಿ 91 ರನ್ ಗಳಿಸಿದ್ದ ಲಾಬುಶೇನ್ ಅವರನ್ನು 91 ರನ್ಗೆ ಔಟ್ ಮಾಡಿ ಮೊದಲ ಯಶಸ್ಸು ನೀಡಿದರು. ಅದಾದ ಬಳಿಕ ಜಡೇಜಾ ಮ್ಯಾಥ್ಯೂ ವೇಡ್ ವಿಕೆಟ್ ಪಡೆದು ಆಸ್ಟ್ರೇಲಿಯಾಗೆ ಮತ್ತೊಂದು ಆಘಾತವನ್ನು ನೀಡಿದ್ದರು. ಬಳಿಕ ಪ್ಯಾಟ್ ಕಮ್ಮಿನ್ಸ್ ಹಾಗೂ ನಥನ್ ಲಿಯಾನ್ ಕೂಡ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದ್ದರು.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm