ಬ್ರೇಕಿಂಗ್ ನ್ಯೂಸ್
08-01-21 03:32 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದರೆ. ಟೆಸ್ಟ್ ಕ್ರಿಕೆಟ್ನ 27ನೇ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಇನ್ನಿಂಗ್ಸ್ಗೆ ಆಸರೆಯಾದರು. ಈ ಮೂಲಕ ಆಸ್ಟ್ರೇಲಿಯಾ ಮುನ್ನೂರು ರನ್ಗಳ ಗಡಿಯನ್ನು ದಾಟಲು ಕಾರಣರಾದರು.
ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ನಲ್ಲಿ 131 ರನ್ಗಳ ಭರ್ಜರಿ ಪ್ರದರ್ಶನವನ್ನು ನೀಡಿದರು. ಈ ಮೂಲಕ ಮತ್ತಷ್ಟು ರನ್ ಆಸಿಸ್ ಪಡೆಯ ಖಾತೆಗೆ ಸೇರಿಸುವ ಉದ್ದೇಶವನ್ನಿಟ್ಟುಕೊಂಡಿದ್ದರು. ಆದರೆ ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಅದ್ಭುತವಾದ ಥ್ರೋ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಆಸಿಸ್ ಇನ್ನಿಂಗ್ಸ್ನ ಅಂತ್ಯಕ್ಕೆ ಕಾರಣರಾದರು.
ಸ್ಟೀವ್ ಸ್ಮಿತ್ 130 ರನ್ ಗಳಿಸಿದ್ದ ವೇಳೆ ಎರಡು ರನ್ ಗಳಿಸುವ ಪ್ರಯತ್ನವನ್ನು ನಡೆಸಿದ್ದರು. ಮೊದಲ ರನ್ಅನ್ನು ಯಶಸ್ವಿಯಾಗಿ ಪೂರೈಸಿ ಎರಡನೇ ರನ್ಗೆ ಓಟಕ್ಕಿತ್ತರು. ಈ ವೇಳೆ ಚೆಂಡು ಫೀಲ್ಡರ್ ರವೀಂದ್ರ ಜಡೇಜಾ ಕೈಗೆ ತಲುಪಿತ್ತು. ಜಡೇಜಾ ಚೆಂಡನ್ನು ನೇರವಾಗಿ ಗುರಿಯಿಟ್ಟು ಸ್ಟ್ರೈಕರ್ ತುದಿಯ ವಿಕೆಟ್ಗೆ ಎಸೆದರು. ಅದು ವಿಕೆಟ್ ಹಾರಿಸುವ ಮೂಲಕ ಸ್ಮಿತ್ ಅವರ ಅದ್ಭುತ ಇನ್ನಿಂಗ್ಸ್ ಅಂತ್ಯಗೊಳಿಸಿತು. ಅಲ್ಲಿಗೆ ಸ್ಮಿತ್ 131 ರನ್ ಗಳಿಸಿದ್ದರು. ಜಡೇಜಾ ಅವರ ಈ ಫೀಲ್ಡಿಂಗ್ಗೆ ಅಭಿಮಾನಿಗಳು ಮನಸೋತಿದ್ದು ಟ್ವಿಟ್ಟರ್ನಲ್ಲಿ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದೆ.
ರವೀಂದ್ರ ಜಡೇಜಾ ಸ್ಟೀವ್ ಸ್ಮಿತ್ ಅವರನ್ನು ರನೌಟ್ ಮಾಡುವ ಮುನ್ನ ಬೌಲಿಂಗ್ನಲ್ಲೂ ಭಾರತಕ್ಕೆ ಉತ್ತಮ ಯಶಸ್ಸನ್ನು ನೀಡಿದರು. ಟೀಮ್ ಇಂಡಿಯಾ ಪರವಾಗಿ ಜಡೇಜಾ ಆಸ್ಟ್ರೇಲಿಯಾದ 4 ವಿಕೆಟ್ ಕಿತ್ತಿದ್ದಾರೆ. ಮೊದಲ ದಿನದಾಟದಲ್ಲಿ ಬೌಲಿಂಗ್ ಮಾಡಲು ಜಡೇಜಾ ಹೆಚ್ಚಿನ ಅವಕಾಶವನ್ನು ಪಡೆದಿರಲಿಲ್ಲ. ಎರಡನೇ ದಿನದಲ್ಲಿ 91 ರನ್ ಗಳಿಸಿದ್ದ ಲಾಬುಶೇನ್ ಅವರನ್ನು 91 ರನ್ಗೆ ಔಟ್ ಮಾಡಿ ಮೊದಲ ಯಶಸ್ಸು ನೀಡಿದರು. ಅದಾದ ಬಳಿಕ ಜಡೇಜಾ ಮ್ಯಾಥ್ಯೂ ವೇಡ್ ವಿಕೆಟ್ ಪಡೆದು ಆಸ್ಟ್ರೇಲಿಯಾಗೆ ಮತ್ತೊಂದು ಆಘಾತವನ್ನು ನೀಡಿದ್ದರು. ಬಳಿಕ ಪ್ಯಾಟ್ ಕಮ್ಮಿನ್ಸ್ ಹಾಗೂ ನಥನ್ ಲಿಯಾನ್ ಕೂಡ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದ್ದರು.
This News Article is a Copy of MYKHEL
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm