ಬ್ರೇಕಿಂಗ್ ನ್ಯೂಸ್
08-01-21 03:32 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದರೆ. ಟೆಸ್ಟ್ ಕ್ರಿಕೆಟ್ನ 27ನೇ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಇನ್ನಿಂಗ್ಸ್ಗೆ ಆಸರೆಯಾದರು. ಈ ಮೂಲಕ ಆಸ್ಟ್ರೇಲಿಯಾ ಮುನ್ನೂರು ರನ್ಗಳ ಗಡಿಯನ್ನು ದಾಟಲು ಕಾರಣರಾದರು.
ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ನಲ್ಲಿ 131 ರನ್ಗಳ ಭರ್ಜರಿ ಪ್ರದರ್ಶನವನ್ನು ನೀಡಿದರು. ಈ ಮೂಲಕ ಮತ್ತಷ್ಟು ರನ್ ಆಸಿಸ್ ಪಡೆಯ ಖಾತೆಗೆ ಸೇರಿಸುವ ಉದ್ದೇಶವನ್ನಿಟ್ಟುಕೊಂಡಿದ್ದರು. ಆದರೆ ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಅದ್ಭುತವಾದ ಥ್ರೋ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಆಸಿಸ್ ಇನ್ನಿಂಗ್ಸ್ನ ಅಂತ್ಯಕ್ಕೆ ಕಾರಣರಾದರು.
ಸ್ಟೀವ್ ಸ್ಮಿತ್ 130 ರನ್ ಗಳಿಸಿದ್ದ ವೇಳೆ ಎರಡು ರನ್ ಗಳಿಸುವ ಪ್ರಯತ್ನವನ್ನು ನಡೆಸಿದ್ದರು. ಮೊದಲ ರನ್ಅನ್ನು ಯಶಸ್ವಿಯಾಗಿ ಪೂರೈಸಿ ಎರಡನೇ ರನ್ಗೆ ಓಟಕ್ಕಿತ್ತರು. ಈ ವೇಳೆ ಚೆಂಡು ಫೀಲ್ಡರ್ ರವೀಂದ್ರ ಜಡೇಜಾ ಕೈಗೆ ತಲುಪಿತ್ತು. ಜಡೇಜಾ ಚೆಂಡನ್ನು ನೇರವಾಗಿ ಗುರಿಯಿಟ್ಟು ಸ್ಟ್ರೈಕರ್ ತುದಿಯ ವಿಕೆಟ್ಗೆ ಎಸೆದರು. ಅದು ವಿಕೆಟ್ ಹಾರಿಸುವ ಮೂಲಕ ಸ್ಮಿತ್ ಅವರ ಅದ್ಭುತ ಇನ್ನಿಂಗ್ಸ್ ಅಂತ್ಯಗೊಳಿಸಿತು. ಅಲ್ಲಿಗೆ ಸ್ಮಿತ್ 131 ರನ್ ಗಳಿಸಿದ್ದರು. ಜಡೇಜಾ ಅವರ ಈ ಫೀಲ್ಡಿಂಗ್ಗೆ ಅಭಿಮಾನಿಗಳು ಮನಸೋತಿದ್ದು ಟ್ವಿಟ್ಟರ್ನಲ್ಲಿ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದೆ.
ರವೀಂದ್ರ ಜಡೇಜಾ ಸ್ಟೀವ್ ಸ್ಮಿತ್ ಅವರನ್ನು ರನೌಟ್ ಮಾಡುವ ಮುನ್ನ ಬೌಲಿಂಗ್ನಲ್ಲೂ ಭಾರತಕ್ಕೆ ಉತ್ತಮ ಯಶಸ್ಸನ್ನು ನೀಡಿದರು. ಟೀಮ್ ಇಂಡಿಯಾ ಪರವಾಗಿ ಜಡೇಜಾ ಆಸ್ಟ್ರೇಲಿಯಾದ 4 ವಿಕೆಟ್ ಕಿತ್ತಿದ್ದಾರೆ. ಮೊದಲ ದಿನದಾಟದಲ್ಲಿ ಬೌಲಿಂಗ್ ಮಾಡಲು ಜಡೇಜಾ ಹೆಚ್ಚಿನ ಅವಕಾಶವನ್ನು ಪಡೆದಿರಲಿಲ್ಲ. ಎರಡನೇ ದಿನದಲ್ಲಿ 91 ರನ್ ಗಳಿಸಿದ್ದ ಲಾಬುಶೇನ್ ಅವರನ್ನು 91 ರನ್ಗೆ ಔಟ್ ಮಾಡಿ ಮೊದಲ ಯಶಸ್ಸು ನೀಡಿದರು. ಅದಾದ ಬಳಿಕ ಜಡೇಜಾ ಮ್ಯಾಥ್ಯೂ ವೇಡ್ ವಿಕೆಟ್ ಪಡೆದು ಆಸ್ಟ್ರೇಲಿಯಾಗೆ ಮತ್ತೊಂದು ಆಘಾತವನ್ನು ನೀಡಿದ್ದರು. ಬಳಿಕ ಪ್ಯಾಟ್ ಕಮ್ಮಿನ್ಸ್ ಹಾಗೂ ನಥನ್ ಲಿಯಾನ್ ಕೂಡ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದ್ದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm