ಬ್ರೇಕಿಂಗ್ ನ್ಯೂಸ್
08-01-21 03:32 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದರೆ. ಟೆಸ್ಟ್ ಕ್ರಿಕೆಟ್ನ 27ನೇ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಇನ್ನಿಂಗ್ಸ್ಗೆ ಆಸರೆಯಾದರು. ಈ ಮೂಲಕ ಆಸ್ಟ್ರೇಲಿಯಾ ಮುನ್ನೂರು ರನ್ಗಳ ಗಡಿಯನ್ನು ದಾಟಲು ಕಾರಣರಾದರು.
ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ನಲ್ಲಿ 131 ರನ್ಗಳ ಭರ್ಜರಿ ಪ್ರದರ್ಶನವನ್ನು ನೀಡಿದರು. ಈ ಮೂಲಕ ಮತ್ತಷ್ಟು ರನ್ ಆಸಿಸ್ ಪಡೆಯ ಖಾತೆಗೆ ಸೇರಿಸುವ ಉದ್ದೇಶವನ್ನಿಟ್ಟುಕೊಂಡಿದ್ದರು. ಆದರೆ ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಅದ್ಭುತವಾದ ಥ್ರೋ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಆಸಿಸ್ ಇನ್ನಿಂಗ್ಸ್ನ ಅಂತ್ಯಕ್ಕೆ ಕಾರಣರಾದರು.
ಸ್ಟೀವ್ ಸ್ಮಿತ್ 130 ರನ್ ಗಳಿಸಿದ್ದ ವೇಳೆ ಎರಡು ರನ್ ಗಳಿಸುವ ಪ್ರಯತ್ನವನ್ನು ನಡೆಸಿದ್ದರು. ಮೊದಲ ರನ್ಅನ್ನು ಯಶಸ್ವಿಯಾಗಿ ಪೂರೈಸಿ ಎರಡನೇ ರನ್ಗೆ ಓಟಕ್ಕಿತ್ತರು. ಈ ವೇಳೆ ಚೆಂಡು ಫೀಲ್ಡರ್ ರವೀಂದ್ರ ಜಡೇಜಾ ಕೈಗೆ ತಲುಪಿತ್ತು. ಜಡೇಜಾ ಚೆಂಡನ್ನು ನೇರವಾಗಿ ಗುರಿಯಿಟ್ಟು ಸ್ಟ್ರೈಕರ್ ತುದಿಯ ವಿಕೆಟ್ಗೆ ಎಸೆದರು. ಅದು ವಿಕೆಟ್ ಹಾರಿಸುವ ಮೂಲಕ ಸ್ಮಿತ್ ಅವರ ಅದ್ಭುತ ಇನ್ನಿಂಗ್ಸ್ ಅಂತ್ಯಗೊಳಿಸಿತು. ಅಲ್ಲಿಗೆ ಸ್ಮಿತ್ 131 ರನ್ ಗಳಿಸಿದ್ದರು. ಜಡೇಜಾ ಅವರ ಈ ಫೀಲ್ಡಿಂಗ್ಗೆ ಅಭಿಮಾನಿಗಳು ಮನಸೋತಿದ್ದು ಟ್ವಿಟ್ಟರ್ನಲ್ಲಿ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದೆ.
ರವೀಂದ್ರ ಜಡೇಜಾ ಸ್ಟೀವ್ ಸ್ಮಿತ್ ಅವರನ್ನು ರನೌಟ್ ಮಾಡುವ ಮುನ್ನ ಬೌಲಿಂಗ್ನಲ್ಲೂ ಭಾರತಕ್ಕೆ ಉತ್ತಮ ಯಶಸ್ಸನ್ನು ನೀಡಿದರು. ಟೀಮ್ ಇಂಡಿಯಾ ಪರವಾಗಿ ಜಡೇಜಾ ಆಸ್ಟ್ರೇಲಿಯಾದ 4 ವಿಕೆಟ್ ಕಿತ್ತಿದ್ದಾರೆ. ಮೊದಲ ದಿನದಾಟದಲ್ಲಿ ಬೌಲಿಂಗ್ ಮಾಡಲು ಜಡೇಜಾ ಹೆಚ್ಚಿನ ಅವಕಾಶವನ್ನು ಪಡೆದಿರಲಿಲ್ಲ. ಎರಡನೇ ದಿನದಲ್ಲಿ 91 ರನ್ ಗಳಿಸಿದ್ದ ಲಾಬುಶೇನ್ ಅವರನ್ನು 91 ರನ್ಗೆ ಔಟ್ ಮಾಡಿ ಮೊದಲ ಯಶಸ್ಸು ನೀಡಿದರು. ಅದಾದ ಬಳಿಕ ಜಡೇಜಾ ಮ್ಯಾಥ್ಯೂ ವೇಡ್ ವಿಕೆಟ್ ಪಡೆದು ಆಸ್ಟ್ರೇಲಿಯಾಗೆ ಮತ್ತೊಂದು ಆಘಾತವನ್ನು ನೀಡಿದ್ದರು. ಬಳಿಕ ಪ್ಯಾಟ್ ಕಮ್ಮಿನ್ಸ್ ಹಾಗೂ ನಥನ್ ಲಿಯಾನ್ ಕೂಡ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದ್ದರು.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am