ಬ್ರೇಕಿಂಗ್ ನ್ಯೂಸ್
11-01-21 02:07 pm Source: MYKHEL ಕ್ರೀಡೆ
ಸಿಡ್ನಿ : ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಸೋಲಿನ ಸಮೀಪದಲ್ಲಿದ್ದ ಭಾರತವನ್ನು ದ್ವಿತೀಯ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ರಿಷಭ್ ಪಂತ್ ಅರ್ಧ ಶತಕ ಮತ್ತು ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್ ಅವರ ಅಜೇಯ ಆಟ ಸೋಲಿನಿಂದ ಪಾರು ಮಾಡಿದೆ. ಇದರೊಂದಿಗೆ ನಾಲ್ಕು ಪಂದ್ಯಗಳ ಸರಣಿ 1-1ರಿಂದ ಸಮಬಲಗೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ ವಿಲ್ ಪುಕೊವ್ಸ್ಕಿ 62, ಮಾರ್ನಸ್ ಲಾಬುಶೇನ್ 91, ಸ್ಟೀವನ್ ಸ್ಮಿತ್ 131, ಮ್ಯಾಥ್ಯೂ ವೇಡ್ 13, ಮಿಚೆಲ್ ಸ್ಟಾರ್ಕ್ 24 ರನ್ ಬಾರಿಸಿದ್ದರು. ಆಸೀಸ್ 105.4 ಓವರ್ಗೆ 338 ರನ್ ಪೇರಿಸಿತ್ತು.

ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಹಿನ್ನಡೆ
ಮೊದಲ ಇನ್ನಿಂಗ್ಸ್ನಲ್ಲಿ ಭಾರತದಿಂದ ರೋಹಿತ್ ಶರ್ಮಾ 26, ಶುಬ್ಮನ್ ಗಿಲ್ 50, ಚೇತೇಶ್ವರ್ ಪೂಜಾರ 50, ನಾಯಕ ಅಜಿಂಕ್ಯ ರಹಾನೆ 22, ರಿಷಭ್ ಪಂತ್ 36, ರವೀಂದ್ರ ಜಡೇಜಾ ಅಜೇಯ 28, ರವಿಚಂದ್ರನ್ ಅಶ್ವಿನ್ 10, ಮೊಹಮ್ಮದ್ ಸಿರಾಜ್ 6 ರನ್ ಬಾರಿಸಿದರು. ಭಾರತ 100.4 ಓವರ್ಗೆ ಎಲ್ಲಾ ವಿಕೆಟ್ ಕಳೆದು 244 ರನ್ ಪೇರಿಸಿ 94 ರನ್ ಹಿನ್ನಡೆ ಅನುಭವಿಸಿತು.

312 ರನ್ಗೆ ಆಸ್ಟ್ರೇಲಿಯಾ ಡಿಕ್ಲೇರ್
ದ್ವಿತೀಯ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ, ಡೇವಿಡ್ ವಾರ್ನರ್ 13, ವಿಲ್ ಪುಕೊವ್ಸ್ಕಿ 10, ಮಾರ್ನಸ್ ಲಾಬುಶೇನ್ 73, ಸ್ಟೀವನ್ ಸ್ಮಿತ್ 81, ಕ್ಯಾಮರಾನ್ ಗ್ರೀನ್ 84, ಟಿಮ್ ಪೇನ್ ಅಜೇಯ 39 ರನ್ನೊಂದಿಗೆ 87 ಓವರ್ಗೆ 6 ವಿಕೆಟ್ ಕಳೆದು 312 ರನ್ ಗಳಿಸಿ ಡಿಕ್ಲೇರ್ ಘೋಷಿಸಿದೆ.

ರಿಷಭ್ ಪಂತ್ ಭರ್ಜರಿ ಬ್ಯಾಟಿಂಗ್
ದ್ವಿತೀಯ ಇನ್ನಿಂಗ್ಸ್ನಲ್ಲಿ ಭಾರತದಿಂದ ರೋಹಿತ್ ಶರ್ಮಾ 52, ಶುಬ್ಮನ್ ಗಿಲ್ 31, ಚೇತೇಶ್ವರ್ ಪೂಜಾರ 77, ರಿಷಭ್ ಪಂತ್ 97, ಹನುಮ ವಿಹಾರಿ ಅಜೇಯ 23, ರವಿಚಂದ್ರನ್ ಅಶ್ವಿನ್ ಅಜೇಯ ಅಜೇಯ 39 ರನ್ ಸೇರಿಸಿದರು. 131 ಓವರ್ಗೆ ಭಾರತ 5 ವಿಕೆಟ್ ಕಳೆದು 334 ರನ್ ಬಾರಿಸಿತ್ತು. ಆದರೆ ದಿನದಾಟ ಮುಗಿದಿದ್ದರಿಂದ ಫಲಿತಾಂಶ ಡ್ರಾ ಎಂದು ಘೋಷಿಸಲ್ಪಟ್ಟಿತು.

ಪ್ಯಾಟ್ ಕಮಿನ್ಸ್ ಬೆಸ್ಟ್ ಬೌಲಿಂಗ್
ಆಸ್ಟ್ರೇಲಿಯಾ ಇನ್ನಿಂಗ್ಸ್ನಲ್ಲಿ ಜಸ್ಪ್ರೀತ್ ಬೂಮ್ರಾ 2+1, ಮೊಹಮ್ಮದ್ ಸಿರಾಜ್ 1+1, ಆರ್ ಅಶ್ವಿನ್ 2, ನವದೀಪ್ ಸೈನಿ 2+2, ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಭಾರತದ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ 1, ಜೋಶ್ ಹ್ಯಾಝಲ್ವುಡ್ 2+2, ಪ್ಯಾಟ್ ಕಮಿನ್ಸ್ 4+1, ನೇಥನ್ ಲಿಯಾನ್ 1 ವಿಕೆಟ್ನೊಂದಿಗೆ ಗಮನ ಸೆಳೆದರು. ಸ್ಟೀವ್ ಸ್ಮಿತ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm