ಬ್ರೇಕಿಂಗ್ ನ್ಯೂಸ್
11-01-21 02:07 pm Source: MYKHEL ಕ್ರೀಡೆ
ಸಿಡ್ನಿ : ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಸೋಲಿನ ಸಮೀಪದಲ್ಲಿದ್ದ ಭಾರತವನ್ನು ದ್ವಿತೀಯ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ರಿಷಭ್ ಪಂತ್ ಅರ್ಧ ಶತಕ ಮತ್ತು ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್ ಅವರ ಅಜೇಯ ಆಟ ಸೋಲಿನಿಂದ ಪಾರು ಮಾಡಿದೆ. ಇದರೊಂದಿಗೆ ನಾಲ್ಕು ಪಂದ್ಯಗಳ ಸರಣಿ 1-1ರಿಂದ ಸಮಬಲಗೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ ವಿಲ್ ಪುಕೊವ್ಸ್ಕಿ 62, ಮಾರ್ನಸ್ ಲಾಬುಶೇನ್ 91, ಸ್ಟೀವನ್ ಸ್ಮಿತ್ 131, ಮ್ಯಾಥ್ಯೂ ವೇಡ್ 13, ಮಿಚೆಲ್ ಸ್ಟಾರ್ಕ್ 24 ರನ್ ಬಾರಿಸಿದ್ದರು. ಆಸೀಸ್ 105.4 ಓವರ್ಗೆ 338 ರನ್ ಪೇರಿಸಿತ್ತು.

ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಹಿನ್ನಡೆ
ಮೊದಲ ಇನ್ನಿಂಗ್ಸ್ನಲ್ಲಿ ಭಾರತದಿಂದ ರೋಹಿತ್ ಶರ್ಮಾ 26, ಶುಬ್ಮನ್ ಗಿಲ್ 50, ಚೇತೇಶ್ವರ್ ಪೂಜಾರ 50, ನಾಯಕ ಅಜಿಂಕ್ಯ ರಹಾನೆ 22, ರಿಷಭ್ ಪಂತ್ 36, ರವೀಂದ್ರ ಜಡೇಜಾ ಅಜೇಯ 28, ರವಿಚಂದ್ರನ್ ಅಶ್ವಿನ್ 10, ಮೊಹಮ್ಮದ್ ಸಿರಾಜ್ 6 ರನ್ ಬಾರಿಸಿದರು. ಭಾರತ 100.4 ಓವರ್ಗೆ ಎಲ್ಲಾ ವಿಕೆಟ್ ಕಳೆದು 244 ರನ್ ಪೇರಿಸಿ 94 ರನ್ ಹಿನ್ನಡೆ ಅನುಭವಿಸಿತು.

312 ರನ್ಗೆ ಆಸ್ಟ್ರೇಲಿಯಾ ಡಿಕ್ಲೇರ್
ದ್ವಿತೀಯ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ, ಡೇವಿಡ್ ವಾರ್ನರ್ 13, ವಿಲ್ ಪುಕೊವ್ಸ್ಕಿ 10, ಮಾರ್ನಸ್ ಲಾಬುಶೇನ್ 73, ಸ್ಟೀವನ್ ಸ್ಮಿತ್ 81, ಕ್ಯಾಮರಾನ್ ಗ್ರೀನ್ 84, ಟಿಮ್ ಪೇನ್ ಅಜೇಯ 39 ರನ್ನೊಂದಿಗೆ 87 ಓವರ್ಗೆ 6 ವಿಕೆಟ್ ಕಳೆದು 312 ರನ್ ಗಳಿಸಿ ಡಿಕ್ಲೇರ್ ಘೋಷಿಸಿದೆ.

ರಿಷಭ್ ಪಂತ್ ಭರ್ಜರಿ ಬ್ಯಾಟಿಂಗ್
ದ್ವಿತೀಯ ಇನ್ನಿಂಗ್ಸ್ನಲ್ಲಿ ಭಾರತದಿಂದ ರೋಹಿತ್ ಶರ್ಮಾ 52, ಶುಬ್ಮನ್ ಗಿಲ್ 31, ಚೇತೇಶ್ವರ್ ಪೂಜಾರ 77, ರಿಷಭ್ ಪಂತ್ 97, ಹನುಮ ವಿಹಾರಿ ಅಜೇಯ 23, ರವಿಚಂದ್ರನ್ ಅಶ್ವಿನ್ ಅಜೇಯ ಅಜೇಯ 39 ರನ್ ಸೇರಿಸಿದರು. 131 ಓವರ್ಗೆ ಭಾರತ 5 ವಿಕೆಟ್ ಕಳೆದು 334 ರನ್ ಬಾರಿಸಿತ್ತು. ಆದರೆ ದಿನದಾಟ ಮುಗಿದಿದ್ದರಿಂದ ಫಲಿತಾಂಶ ಡ್ರಾ ಎಂದು ಘೋಷಿಸಲ್ಪಟ್ಟಿತು.

ಪ್ಯಾಟ್ ಕಮಿನ್ಸ್ ಬೆಸ್ಟ್ ಬೌಲಿಂಗ್
ಆಸ್ಟ್ರೇಲಿಯಾ ಇನ್ನಿಂಗ್ಸ್ನಲ್ಲಿ ಜಸ್ಪ್ರೀತ್ ಬೂಮ್ರಾ 2+1, ಮೊಹಮ್ಮದ್ ಸಿರಾಜ್ 1+1, ಆರ್ ಅಶ್ವಿನ್ 2, ನವದೀಪ್ ಸೈನಿ 2+2, ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಭಾರತದ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ 1, ಜೋಶ್ ಹ್ಯಾಝಲ್ವುಡ್ 2+2, ಪ್ಯಾಟ್ ಕಮಿನ್ಸ್ 4+1, ನೇಥನ್ ಲಿಯಾನ್ 1 ವಿಕೆಟ್ನೊಂದಿಗೆ ಗಮನ ಸೆಳೆದರು. ಸ್ಟೀವ್ ಸ್ಮಿತ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm