ಬ್ರೇಕಿಂಗ್ ನ್ಯೂಸ್
12-08-20 05:30 pm Headline Karnataka News Network ಕ್ರೀಡೆ
ಮುಂಬೈ, ಆಗಸ್ಟ್ 12: 27 ವರ್ಷದ ಯುವ ಕ್ರಿಕೆಟ್ ಆಟಗಾರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ 27 ವರ್ಷದ ಕ್ರಿಕೆಟಿಗ ಕರಣ್ ತಿವಾರಿ ಸೋಮವಾರ ರಾತ್ರಿ ತಮ್ಮ ಮಲಾಡ್ ಪ್ರದೇಶದಕ್ಕಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಣ್ ತಿವಾರಿ ಮುಂಬೈ ವೃತ್ತಿಪರ ಕ್ರಿಕೆಟ್ ತಂಡದ ಭಾಗವಾಗಿರಲಿಲ್ಲ. ಆದರೆ ಅವರು ಅವರಿಗೆ ನೆಟ್ ಬೌಲರ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ತಿವಾರಿ ವೃತ್ತಿಜೀವನದಲ್ಲಿ ಯಶಸ್ಸು ಸಿಗದೆ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಕರಣ್ ತಿವಾರಿ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದು, ತನ್ನ ತಾಯಿ ಮತ್ತು ಸಹೋದರನೊಂದಿಗೆ ಮುಂಬೈನ ಮಲಾಡ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೊತೆಗೆ ಕ್ರಿಕೆಟರ್ ಆಗಬೇಕು ಎಂಬ ಕನಸು ಕಂಡಿದ್ದ ತಿವಾರಿ ಮುಂಬೈನ ಹಲವಾರು ಕ್ಲಬ್ಗಳಿಗೆ ಆಡಿದ್ದರು. ಜೊತೆಗೆ ದೇಶೀಯ ಕ್ರಿಕೆಟ್ ಆಟಗಾರಿಗೆ ನೆಟ್ ಬಾಲ್ ಬೌಲರ್ ಆಗಿದ್ದರು. ಇದರಿಂದ ಮನನೊಂದಿದ್ದ ತಿವಾರಿ ತಮ್ಮ ಪ್ರತಿಭೆಯನ್ನು ತೋರಿಸಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು.
ಕೊರೊನಾ ಲಾಕ್ಡೌನ್ ನಂತರ ತಿವಾರಿ ಮನೆಯಿಂದ ಹೊರಗೆ ಬಾರದೇ ಖಿನ್ನತೆಗೆ ಒಳಗಾಗಿದ್ದರು. ಜೊತೆಗೆ ತನ್ನ ರಾಜಸ್ಥಾನದಲ್ಲಿರುವ ಗೆಳೆಯರಿಗೆ ಕರೆ ಮಾಡಿ ನಾನು ಏನನ್ನೂ ಸಾಧಿಸಲು ಆಗಲಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಂತರ ಸ್ನೇಹಿತರು ತಿವಾರಿ ಸಹೋದರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಕರಣ್ ತಿವಾರಿ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm