ಬ್ರೇಕಿಂಗ್ ನ್ಯೂಸ್
14-01-21 04:50 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ತಂಡದ ಯುವ ಆರಂಭಿಕ ಆಟಗಾರ ವಿಲ್ ಪುಕೋವ್ಸ್ಕಿ ಭಾರತದ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯದಿಂದ ಹೊರಬಿದ್ದದ್ದಾರೆ. ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಒಂದ್ಯದ ವೇಳೆ ಪುಕೋವ್ಸ್ಕಿ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಅವರು ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.
ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಈ ಬಗ್ಗೆ ಖಚಿತವಾಗಿ ಗುರುವಾರ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಭುಜದ ನೋವಿಗೆ ಒಳಗಾಗಿರುವ ಪುಕೋವ್ಸ್ಕಿ ಆಡಲು ಸಮರ್ಥರಾಗಿಲ್ಲ. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಾರರು ಅವರ ಬದಲಿಗೆ ಮಾರ್ಕಸ್ ಹ್ಯಾರಿಸ್ ಆರಂಭಿಕನಾಗಿ ಡೇವಿಡ್ ವಾರ್ನರ್ಗೆ ಸಾಥ್ ನೀಡಲಿದ್ದಾರೆ ಎಂದು ಟಿಮ್ ಪೈನ್ ಹೇಳಿದ್ದಾರೆ.
ಶುಕ್ರವಾರದಿಂದ ಆರಂಭವಾಗಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಹಿನ್ನೆಲೆಯಲ್ಲಿ ವಿಲ್ ಪುಕೋವ್ಸ್ಕಿಗೆ ಗುರುವಾರ ಫಿಟ್ನೆಸ್ ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ ಅವರು ವಿಫಲರಾಗಿದ್ದಾರೆ. ಹೀಗಾಗಿ 2019ರ ಆ್ಯಶಸ್ ಸರಣಿಯಲ್ಲಿ ಕೊನೆಯದಾಗಿ ಕಣಕ್ಕಿಳಿದಿದ್ದ ಹ್ಯಾರಿಸ್ ಭಾರತದ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ವಿಲ್ ಪುಕೋವ್ಸ್ಕಿ ಅಲಭ್ಯತೆಯಿಂದಾಗಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸಿಸ್ ಪರವಾಗಿ ಕಣಕ್ಕಿಳಿಯುತ್ತಿರುವ ಐದನೇ ಆರಂಭಿಕ ಆಟಗಾರ ಹ್ಯಾರಿಸ್ ಆಗಲಿದ್ದಾರೆ. ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ನ ಅಂತಿಮ ದಿನದಾಟ ಸೋಮವಾರ ನಡೆಯುತ್ತಿದ್ದ ವೇಳೆ ವಿಲ್ ಪುಕೋವ್ಸ್ಕಿ ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದರು. ಭುಜದ ನೋವಿಗೆ ಒಳಗಾಗಿದ್ದ ಅವರು ಬಳಿಕ ಸ್ಕ್ಯಾನಿಂಗ್ಗೆ ಒಳಪಟ್ಟರು. ಈ ಸಂದರ್ಭದಲ್ಲಿ ಭುಜದ ಮೂಳೆಯಲ್ಲಿ ಸಣ್ಣ ಸ್ಥಳಾಂತರವಾಗಿರುವುದು ಕಂಡು ಬಂದಿತ್ತು. ಇದರಿಂದ ಚೇತರಿದಿಕೊಳ್ಳದ ಹಿನ್ನೆಲೆಯಲ್ಲಿ ಅವರು ಅಂತಿಮ ಟೆಸ್ಟ್ನಿಂದ ಹೊರಗುಳಿಯಲಿದ್ದಾರೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ/ ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್, ನಥನ್ ಲಿಯಾನ್.
This News Article is a Copy of MYKHEL
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
05-09-25 12:34 pm
Udupi Correspondent
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am
Mangalore, Honey Trap, Kundapur, Crime: ಹುಡುಗ...
04-09-25 01:10 pm
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm