ಬ್ರೇಕಿಂಗ್ ನ್ಯೂಸ್
18-01-21 03:32 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಸ್ಪಿನ್ ಬೌಲರ್ ದಿಗ್ಗಜ ಆಟಗಾರ ಬಿಎಸ್ ಚಂದ್ರಶೇಖರ್ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಎಸ್ ಚಂದ್ರಶೇಖರ್ ಅವರಿಗೆ 75 ವರ್ಷ ವಯಸ್ಸಾಗಿದ್ದು ಬೆಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಬಿಎಸ್ ಚಂದ್ರ ಶೇಖರ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ಮೂಲಗಳು ಮಾಹಿತಿಯನ್ನು ನೀಡಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಂದ್ರಶೇಖರ್ ಅವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಎಸ್ ಚಂದ್ರಶೇಖರ್ 1960-70ರ ದಶಕದಲ್ಲಿ ಭಾರತೀಯ ಕ್ರಿಕೆಟ್ ತಂಡದ ಅವಿಭಾಜ್ಯ ಅಂಗವಾಗಿದ್ದರು. ಸ್ಪಿನ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟ್ಸ್ಮನ್ಗಳನ್ನು ಕಂಗೆಡಿಸಿದ್ದರು. ಇಎಎಸ್ ಪ್ರಸನ್ನ, ಬಿಷನ್ ಸಿಂಗ್ ಬೇಡಿ ಹಾಗೂ ಎಸ್ ವೆಂಕಟ ರಾಘವನ್ ಅವರ ಜೊತೆಗೆ ಬಿಎಸ್ ಚಂದ್ರ ಶೇಖರ್ ಭಾರತ ತಂಡದ ದೊಡ್ಡ ಅಸ್ತ್ರವಾಗಿದ್ದರು. ಚಂದ್ರ ಶೇಖರ್ 16 ವರ್ಷಗಳ ಕಾಲ ಅಂತಾರಾಷ್ಟರೀಯ ಕ್ರಿಕೆಟ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಈ ಅವಧಿಯಲ್ಲಿ ಅವರು 58 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು 242 ವಿಕೆಟ್ಗಳನ್ನು ಕಿತ್ತಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಗಳಿಸಿದ ರನ್ಗಿಂತ ಅಧಿಕ ವಿಕೆಟ್ ಪಡೆದ ವಿಶ್ವದ ಕೇವಲ ಇಬ್ಬರೇ ಆಟಗಾರರ ಪೈಕಿ ಚಂದ್ರ ಶೇಖರ್ ಕೂಡ ಒಬ್ಬರಾಗಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಚಂದ್ರ ಶೇಖರ್ ಒಟ್ಟಾರೆ 167 ರನ್ ಗಳಿಸಿದ್ದಾರೆ.
1972ರಲ್ಲಿ ಚಂದ್ರ ಶೇಖರ್ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. 2002ರಲ್ಲಿ ವಿಸ್ಡನ್ನ "ಶತಮಾನದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ" ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಬಿಎಸ್ ಚಂದ್ರಶೇಖರ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಿಕೆಟ್ ಪ್ರೇಮಿಗಳು ಅವರ ಶೀಘ್ರ ಚೇತರಿಕೆಗಾಗಿ ಹಾರೈಸುತ್ತಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm