ಬ್ರೇಕಿಂಗ್ ನ್ಯೂಸ್
20-01-21 02:42 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಅಂತ್ಯವಾಗಿದ್ದು ಟೀಮ್ ಇಂಡಿಯಾ 2-1 ಅಂತರದಿಂದ ಸರಣಿಯನ್ನು ಸತತ ಎರಡನೇ ಬಾರಿಗೆ ಕೈವಶ ಮಾಡಿಕೊಂಡಿದೆ. ಈ ಸರಣಿಯ ಬಳಿಕ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ ಹಿನ್ನೆಡೆ ಅನುಭವಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕೇವಲ 1 ಪಂದ್ಯವನ್ನಷ್ಟೇ ಆಡಿ ಬಳಿಕ ಪಿತೃತ್ವದ ರಜೆಯಲ್ಲಿ ಭಾರತಕ್ಕೆ ಮರಳಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಟೆಸ್ಟ್ ಶ್ರೇಯಾಂಕದಲ್ಲಿ ಕುಸಿತವನ್ನು ಕಂಡಿದ್ದಾರೆ. ಆಸ್ಟ್ರೇಲಿಯಾದ ಯುವ ಆಟಗಾರ ಮಾರ್ನಾಸ್ ಲಾಬುಶೇನ್ ಮೂರನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದು ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.
ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರಿಸಿದ್ದಾರೆ. ಆರಂಭಿಕ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನದ ಬಳಿಕ ಫಾರ್ಮ್ ಕಂಡುಕೊಂಡ ಸ್ಮಿತ್ ಎರಡನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಮಾರ್ನಾಸ್ ಲ್ಯಾಬುಶೇನ್ ಮೂರನೇ ಸ್ಥಾನಕ್ಕೇರಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಪ್ರಕಟವಾದ ಈ ಶ್ರೇಯಾಂಕ ಪಟ್ಟಿಯಲ್ಲಿ ಅತಿ ಹೆಚ್ಚು ಗಳಿಕೆಯನ್ನು ಕಂಡ ಬ್ಯಾಟ್ಸ್ಮನ್ ಎಂದರೆ ಅದು ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್. ಗಾಬಾ ಅಂಗಳದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ ಪಂತ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ 13ನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ವಿಕೆಟ್ ಕೀಪರ್ಗಳ ಪೈಕಿ ಅತಿ ಹೆಚ್ಚು ಶ್ರೇಯಾಂಕ ಹೊಂದಿರುವ ಆಟಗಾರ ಎನಿಸಿಕೊಂಡಿದ್ದಾರೆ.
This News Article is a Copy of MYKHEL
↗️ Labuschagne moves to No.3
— ICC (@ICC) January 20, 2021
↗️ Root enters top five
↗️ Pujara moves up one spot to No.7
The latest @MRFWorldwide ICC Test Player Rankings for batting are out!
Full rankings: https://t.co/OMjjVx5Mgf pic.twitter.com/49DbXmXznS
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am