ಬ್ರೇಕಿಂಗ್ ನ್ಯೂಸ್
23-01-21 03:24 pm Source: MYKHEL Sadashiva ಕ್ರೀಡೆ
ಧಾಕಾ: ಬಾಂಗ್ಲಾದೇಶ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ತಂಡ ಆತಿಥೇಯ ಬಾಂಗ್ಲಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಧಾಕಾದ ಶೇರ್ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ 7 ವಿಕೆಟ್ ಸುಲಭ ಗೆಲುವು ದಾಖಲಿಸಿದೆ.
ಬಲಗೈ ಆಫ್ಬ್ರೇಕ್ ಬೌಲರ್ ಮೆಹಿದಿ ಹಸನ್ ಮಾರಕ ಬೌಲಿಂಗ್ನಿಂದಾಗಿ ಬಾಂಗ್ಲಾ ಏಕದಿನ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್, ಕ್ಜಾರ್ನ್ ಒಟ್ಲೆ 24, ಎನ್ಕ್ರುಮಾ ಬೊನ್ನರ್ 20, ರೋಮನ್ ಪೋವೆಲ್ 41 ರನ್ನೊಂದಿಗೆ 43.4 ಓವರ್ಗೆ ಎಲ್ಲಾ ವಿಕೆಟ್ ಕಳೆದು 148 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶದಿಂದ ಲಿಟನ್ ದಾಸ್ 22, ನಾಯಕ ತಮೀಮ್ ಇಕ್ಬಾಲ್ 50, ಶಕೀಬ್ ಅಲ್ ಹಸನ್ ಅಜೇಯ 43, ಮುಷ್ಫಿಕರ್ ರಹೀಮ್ ಅಜೇಯ 9 ರನ್ ಸೇರ್ಪಡೆಯೊಂದಿಗೆ ಬಾಂಗ್ಲಾ 33.2 ಓವರ್ಗೆ 3 ವಿಕೆಟ್ ಕಳೆದು 149 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ವೆಸ್ಟ್ ಇಂಡೀಸ್ ಇನ್ನಿಂಗ್ಸ್ನಲ್ಲಿ ಬಾಂಗ್ಲಾದ ಮುಸ್ತಫಿಝುರ್ ರಹ್ಮಾನ್ 2, ಹಸನ್ ಮಹಮ್ಮದ್ 1, ಮೆಹಿದಿ ಹಸನ್ 4 (25 ರನ್), ಶಕೀಬ್ ಅಲ್ ಹಸನ್ 2 ವಿಕೆಟ್ ಪಡೆದರೆ, ಬಾಂಗ್ಲಾ ಇನ್ನಿಂಗ್ಸ್ನಲ್ಲಿ ವಿಂಡೀಸ್ನ ಅಕೀಲ್ ಹೊಸೈನ್, ಜೇಸನ್ ಮೊಹಮ್ಮದ್ ಮತ್ತು ರೇಮನ್ ರೀಫರ್ 1 ವಿಕೆಟ್ನಿಂದ ಗಮನ ಸೆಳೆದರು. ಮೆಹಿದಿ ಹಸನ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm