ಬ್ರೇಕಿಂಗ್ ನ್ಯೂಸ್
25-01-21 04:30 pm Source: MYKHEL Sadashiva ಕ್ರೀಡೆ
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ಗೆ ಕ್ರಿಕೆಟ್ ನಿರ್ದೇಶಕರಾಗಿ ಶ್ರೀಲಂಕಾದ ಬ್ಯಾಟಿಂಗ್ ದಂತಕತೆ ಕುಮಾರ ಸಂಗಕ್ಕಾರ ಆಯ್ಕೆಯಾಗಿದ್ದಾರೆ. 2021ರ ಐಪಿಎಲ್ ಸೀಸನ್ನಲ್ಲಿ ಸಂಗಕ್ಕಾರ ಆರ್ಆರ್ ತಂಡದ ಜೊತೆಗಿದ್ದು ಬಲ ತುಂಬಲಿದ್ದಾರೆ.
ಸದ್ಯ ಇಂಗ್ಲೆಂಡ್ನ ಮೇರಿಲೆಬೋನ್ ಕ್ರಿಕೆಟ್ ಕ್ಲಬ್ನ (ಎಂಸಿಸಿ) ಅಧ್ಯಕ್ಷರಾಗಿರುವ ಕುಮಾರ ಸಂಗಕ್ಕಾರ ಮುಂದೆ ನಾಗ್ಪುರದ ರಾಯಲ್ಸ್ ಅಕಾಡೆಮಿಯಲ್ಲಿದ್ದು ರಾಜಸ್ಥಾನ್ ರಾಯಲ್ಸ್ನ ಕೋಚಿಂಗ್ ರೂಪುರೇಷೆ, ಆ್ಯಕ್ಷನ್ ಪ್ಲ್ಯಾನ್, ತಂಡದ ತಂತ್ರಗಾರಿಕೆ, ಪ್ರತಿಭಾನ್ವೇಶಣೆ, ತಂಡದ ಅಭಿವೃದ್ಧಿ ಇತ್ಯಾದಿಗಳ ಜವಾಬ್ದಾರಿ ಹೊರಲಿದ್ದಾರೆ. 'ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದು ನನಗೆ ಒಳ್ಳೆಯ ಅವಕಾಶ ನೀಡಿದೆ. ಹೊಸ ಸವಾಲು ಹೇಗಿರಲಿದೆ ಎಂಬ ಬಗ್ಗೆ ರೋಮಾಂಚಿತನಾಗಿದ್ದೇನೆ. ಮೈದಾನದಲ್ಲಿ ಐಪಿಎಲ್ ತಂಡ ಭವಿಷ್ಯದಲ್ಲಿ ಬೇರೂರಲು ಅಭಿವೃದ್ಧಿ ಕ್ರಮಗಳನ್ನು ಮಾಡಲಿದ್ದೇನೆ. ಕ್ರಿಕೆಟ್ ಮೂಲ ಸೌಕರ್ಯಗಳತ್ತ ಗಮನ ಹರಿಸಲಿದ್ದೇನೆ,' ಎಂದು ಸಂಗಕ್ಕಾರ ಹೇಳಿದ್ದಾರೆ.
ಶ್ರೀಲಂಕಾ ತಂಡದ ಮಾಜಿ ನಾಯಕರಾಗಿರುವ ಕುಮಾರ ಸಂಗಕ್ಕಾರ, 134 ಟೆಸ್ಟ್ ಪಂದ್ಯಗಳಲ್ಲಿ 12400 ರನ್, 38 ಶತಕ, 404 ಏಕದಿನ ಪಂದ್ಯಗಳಲ್ಲಿ 14234 ರನ್, 25 ಶತಕ, 56 ಟಿ20ಐ ಪಂದ್ಯಗಳಲ್ಲಿ 1382 ರನ್ ಬಾರಿಸಿದ್ದಾರೆ. 71 ಐಪಿಎಲ್ ಪಂದ್ಯಗಳಲ್ಲಿ 1687 ರನ್ ದಾಖಲೆ ಹೊಂದಿದ್ದಾರೆ. ಐಪಿಎಲ್ನಲ್ಲಿ ಸಂಗಕ್ಕಾರ ಕಿಂಗ್ಸ್ XI ಪಂಜಾಬ್, ಡೆಕ್ಕನ್ ಚಾರ್ಜರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm