ಬ್ರೇಕಿಂಗ್ ನ್ಯೂಸ್
27-01-21 03:15 pm Source: MYKHEL Mahesh Malnad ಕ್ರೀಡೆ
ತಿರುವನಂತಪುರಂ, ಜನವರಿ 27: ಆನ್ ಲೈನ್ ಜೂಜು ಪರ ಪ್ರಚಾರ ಕೈಗೊಂಡ ಅನೇಕ ಸೆಲೆಬ್ರಿಟಿಗಳಿಗೆ ಮತ್ತೊಮ್ಮೆ ತೊಂದರೆ ಆರಂಭವಾಗಿದೆ. ಮದ್ರಾಸ್ ಹೈಕೋರ್ಟ್ ನಂತರ ಕೇರಳ ಹೈಕೋರ್ಟಿನಿಂದ ಬುಧವಾರದಂದು ಕ್ರಿಕೆಟರ್ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ, ನಟ ಅಜು ವರ್ಗೀಸ್ ಅವರಿಗೆ ನೋಟಿಸ್ ಜಾರಿಯಾಗಿದೆ.
ಐಪಿಎಲ್ ಸಂದರ್ಭದಲ್ಲಿ ಆನ್ಲೈನ್ ಜೂಜು ಪ್ರಚಾರ ಮಾಡುತ್ತಿರುವ ಈ ಸೆಲೆಬ್ರಿಟಿಗಳಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿವೆ ಸಾವು ನೋವು ಸಂಭವಿಸಿದೆ. ಆಪ್ ಆಧಾರಿತ ಜೂಜು ನಿಲ್ಲಿಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು. ತ್ರಿಶ್ಶೂರ್ ಮೂಲದ ಪಾಲಿ ವರ್ಗೀಸ್ ಎಂಬುವರು ಆನ್ ಲೈನ್ ರಮ್ಮಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಿಚಾರಣೆ ನಡೆಸಿದೆ.
ಆನ್ಲೈನ್ ಜೂಜು ಪರ ಪ್ರಚಾರ ಮಾಡುವ ಕ್ರಿಕೆಟರ್ಸ್ , ನಟ, ನಟಿಯರ ವಿರುದ್ಧದ ಈ ಪಿಐಎಲ್ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಎಲ್ಲರಿಗೂ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಬಗ್ಗೆ ವರದಿ ನೀಡುವಂತೆ ಪಿಣರಾಯಿ ವಿಜಯನ್ ಸರ್ಕಾರಕ್ಕೆ ಸೂಚಿಸಿದೆ. ಕೇರಳ ಗೇಮಿಂಗ್ ಕಾಯ್ದೆ 1960ರ ಅನ್ವಯ ಎಲ್ಲಾ ಬಗೆಯ ದುಡ್ಡು ಕಟ್ಟಿ ಆಡುವ ರಮ್ಮಿ ಗೇಮ್ ಮೇಲೆ ನಿಷೇಧ ಹೇರಬೇಕಾಗುತ್ತದೆ. ಆದರೆ, ಆನ್ ಲೈನ್ ಗೇಮ್ ರಮ್ಮಿ ಇದಕ್ಕೆ ಸೇರ್ಪಡೆಗೊಂಡಿಲ್ಲ, ಕಾಯ್ದೆ ತಿದ್ದುಪಡಿ ಮಾಡಿ ರಮ್ಮಿ ನಿಷೇಧ ಹೇರಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಬಹುಭಾಷಾ ನಟ ಸುದೀಪ್, ಪ್ರಕಾಶ್ ರಾಜ್, ರಾಣಾ ದಗ್ಗುಬಾಟಿ, ನಟಿ ತಮನ್ನಾ ಭಾಟಿಯಾ, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಂತಾದವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಕೊಹ್ಲಿ ಹಾಗೂ ತಮನ್ನಾ ಮೊಬೈಲ್ ಪ್ರೀಮಿಯರ್ ಲೀಗ್ ಪರ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಸುದೀಪ್, ಗಂಗೂಲಿ ಮೈ11 ಸರ್ಕಲ್ ಪರ ಪ್ರಚಾರ ಮಾಡಿದ್ದಾರೆ. ಎಂಪಿಎಲ್ ಸದ್ಯ ಟೀಂ ಇಂಡಿಯಾದ ಕಿಟ್ ಪ್ರಾಯೋಜಕತ್ವ ಕೂಡಾ ಪಡೆದಿದೆ. ಫ್ಯಾಂಟಸಿ ಲೀಗ್ ಡ್ರೀಮ್11 ಸದ್ಯ ಐಪಿಎಲ್ ನ ಶೀರ್ಷಿಕೆ ಪ್ರಾಯೋಜಕತ್ವ ಪಡೆದುಕೊಂಡಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm