ಬ್ರೇಕಿಂಗ್ ನ್ಯೂಸ್
28-01-21 12:06 pm Source: MYKHEL Mahesh Malnad ಕ್ರೀಡೆ
ಚೆನ್ನೈ, ಜನವರಿ 28: ಭಾರತೀಯ ಕ್ರಿಕೆಟ್ ತಂಡದ ಆಲ್ರೌಂಡರ್ ಆಗಿ ಮಿಂಚಿರುವ ತಮಿಳುನಾಡು ಮೂಲದ ವಿಜಯ್ ಶಂಕರ್ ಅವರು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. 30 ವರ್ಷ ವಯಸ್ಸಿನ ವಿಜಯ್ ಶಂಕರ್ ಅವರು ದಾಂಪತ್ಯದ ಇನ್ನಿಂಗ್ಸ್ ಶುರುವಾಗಿದೆ
ಐಪಿಎಲ್ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ. ಯುಎಇಯಲ್ಲಿ ನಡೆದ ಐಪಿಎಲ್ ಗೂ ಮುನ್ನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ವೈಶಾಲಿಯನ್ನು ವರಿಸಿದ್ದಾರೆ. ಮದುವೆಯ ಮೊದಲ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ತಂಡದ ಆಟಗಾರ ವಿಜಯ್ ಶಂಕರ್ ಮದುವೆ ಚಿತ್ರ ಹಂಚಿಕೊಂಡಿದೆ. ಹಿಂದು ಸಂಪ್ರದಾಯದ ಪ್ರಕಾರ ವಿಜಯ್ ಶಂಕರ್ ಹಾಗೂ ವೈಶಾಲಿ ವಿಶ್ವೇಶ್ವರನ್ ವಿವಾಹ ನೆರವೇರಿದೆ. ನೂತನ ದಂಪತಿಗೆ ಐಪಿಎಲ್ ಕ್ರಿಕೆಟರ್ಸ್ ಸೇರಿದಂತೆ ಸಾರ್ವಜನಿಕರಿಂದಲೂ ಶುಭಹಾರೈಕೆಗಳ ಮಹಾಪೂರ ಹರಿದು ಬಂದಿದೆ.
2018ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವಿಜಯ್ ಶಂಕರ್ 12 ಏಕದಿನ ಹಾಗೂ 9 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಬಳಿಕ ತಂಡದಿಂದ ಸ್ಥಾನವನ್ನು ಕಳೆದುಕೊಂಡಿದ್ದರು.
ಐಪಿಎಲ್ ನಲ್ಲಿ ಒಟ್ಟು 40 ಪಂದ್ಯಗಳಿಂದ 654 ರನ್ ಹಾಗೂ 6 ವಿಕೆಟ್ ಗಳಿಸಿದ್ದಾರೆ. ಈ ಆವೃತ್ತಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಅವಕಾಶ ವಿಜಯ್ ಶಂಕರ್ಗೆ ಇದೆ.
This News Article is a Copy of MYKHEL
Sending our best wishes to @vijayshankar260 on this very special day!
— SunRisers Hyderabad (@SunRisers) January 27, 2021
May you have a happy and blessed married life 🧡😁#SRHFamily #OrangeArmy #SRH pic.twitter.com/elDUYKVww2
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm