ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am