ಬ್ರೇಕಿಂಗ್ ನ್ಯೂಸ್
01-02-21 04:11 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಸಾಧಿಸಿದ ದಿಗ್ವಿಜಯ ಕ್ರಿಕೆಟ್ ಪ್ರೇಮಿಗಳಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುಂತಾ ಕ್ಷಣ. ಆಸಿಸ್ ನೆಲದಲ್ಲಿ ಭಾರತ ಸರಣಿ ಗೆದ್ದ ರೀತಿಗೆ ವಿಶ್ವ ಕ್ರಿಕೆಟ್ ಲೋಕವೇ ತಲೆದೂಗಿದೆ. ಈಗ ಈ ಗೆಲುವಿನ ಸಾಹಸಗಾಥೆ ಭಾರತದ ಕೇಂದ್ರ ಸರ್ಕಾರದ ಬಜೆಟ್ ಭಾಷಣದ ವೇಳೆಯಲ್ಲಿಯೂ ಉಲ್ಲೇಖವಾಗಿದೆ.
ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಬಜೆಟ್ಅನ್ನು ಪಾರ್ಲಿಮೆಂಟ್ನಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ಕ್ರಿಕೆಟ್ ತಂಡ ಸಾಧಿಸಿದ ಅಮೋಘ ಜಯವನ್ನು ನಿರ್ಮಲಾ ಸೀತಾರಾಮನ್ ಅವರು ಉದಾಹರಣೆಯಾಗಿ ನೀಡಿದರು.
ಕ್ರಿಕೆಟ್ಅನ್ನು ಪ್ರೀತಿಸುವ ದೇಶವಾಗಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಸ್ಮರಿಸಿಕೊಳ್ಳುತ್ತೇನೆ" ಎಂದು ನಿರ್ಮಲಾ ಸೀತಾರಾಮನ್ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ವಶಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ ಸಾಧನೆಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು. "ಈ ಗೆಲುವು ನಮಗೆ ವ್ಯಕ್ತಿಗಳಾಗಿ ನಾವು ಅದರಲ್ಲೂ ವಿಶೇಷವಾಗಿ ನಮ್ಮ ಯುವಕರು ಹೊಂದಿರುವ ಸಾಮರ್ಥ್ಯ ಹಾಗೂ ಗೆಲುವನ್ನು ಪಡೆಯುವ ಸಲುವಾಗಿ ಹೇರಳವಾದ ಭರವಸೆಯನ್ನು ನಮಗೆ ನೆನಪಿಸಿದೆ" ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೀಮ್ ಇಂಡಿಯಾ ಮೊದಲ ಟೆಸ್ಟ್ನಲ್ಲಿ 36 ರನ್ಗೆ ಎರಡನೇ ಇನ್ನಿಂಗ್ಸ್ನಲ್ಲಿ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಆದರೆ ಈ ಸೋಲಿನಿಂದ ಅದ್ಭುತವಾಗಿ ತಿರುಗಿ ಬೀಳಲು ಯಶಸ್ವಿಯಾದ ತಂಡ ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಪಂದ್ಯವನ್ನು ಗೆದ್ದು ಮತ್ತೊಂದು ಪಂದ್ಯವನ್ನು ಡ್ರಾ ಮಾಡಿಕೊಂಡು ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಮತ್ತೊಮ್ಮೆ ವಶಕ್ಕೆ ಪಡೆಯಲು ಯಶಸ್ವಿಯಾಗಿತ್ತು.
This News Article is a Copy of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am