ಬ್ರೇಕಿಂಗ್ ನ್ಯೂಸ್
01-02-21 04:11 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಸಾಧಿಸಿದ ದಿಗ್ವಿಜಯ ಕ್ರಿಕೆಟ್ ಪ್ರೇಮಿಗಳಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುಂತಾ ಕ್ಷಣ. ಆಸಿಸ್ ನೆಲದಲ್ಲಿ ಭಾರತ ಸರಣಿ ಗೆದ್ದ ರೀತಿಗೆ ವಿಶ್ವ ಕ್ರಿಕೆಟ್ ಲೋಕವೇ ತಲೆದೂಗಿದೆ. ಈಗ ಈ ಗೆಲುವಿನ ಸಾಹಸಗಾಥೆ ಭಾರತದ ಕೇಂದ್ರ ಸರ್ಕಾರದ ಬಜೆಟ್ ಭಾಷಣದ ವೇಳೆಯಲ್ಲಿಯೂ ಉಲ್ಲೇಖವಾಗಿದೆ.
ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಬಜೆಟ್ಅನ್ನು ಪಾರ್ಲಿಮೆಂಟ್ನಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ಕ್ರಿಕೆಟ್ ತಂಡ ಸಾಧಿಸಿದ ಅಮೋಘ ಜಯವನ್ನು ನಿರ್ಮಲಾ ಸೀತಾರಾಮನ್ ಅವರು ಉದಾಹರಣೆಯಾಗಿ ನೀಡಿದರು.
ಕ್ರಿಕೆಟ್ಅನ್ನು ಪ್ರೀತಿಸುವ ದೇಶವಾಗಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಸ್ಮರಿಸಿಕೊಳ್ಳುತ್ತೇನೆ" ಎಂದು ನಿರ್ಮಲಾ ಸೀತಾರಾಮನ್ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ವಶಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ ಸಾಧನೆಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು. "ಈ ಗೆಲುವು ನಮಗೆ ವ್ಯಕ್ತಿಗಳಾಗಿ ನಾವು ಅದರಲ್ಲೂ ವಿಶೇಷವಾಗಿ ನಮ್ಮ ಯುವಕರು ಹೊಂದಿರುವ ಸಾಮರ್ಥ್ಯ ಹಾಗೂ ಗೆಲುವನ್ನು ಪಡೆಯುವ ಸಲುವಾಗಿ ಹೇರಳವಾದ ಭರವಸೆಯನ್ನು ನಮಗೆ ನೆನಪಿಸಿದೆ" ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೀಮ್ ಇಂಡಿಯಾ ಮೊದಲ ಟೆಸ್ಟ್ನಲ್ಲಿ 36 ರನ್ಗೆ ಎರಡನೇ ಇನ್ನಿಂಗ್ಸ್ನಲ್ಲಿ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಆದರೆ ಈ ಸೋಲಿನಿಂದ ಅದ್ಭುತವಾಗಿ ತಿರುಗಿ ಬೀಳಲು ಯಶಸ್ವಿಯಾದ ತಂಡ ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಪಂದ್ಯವನ್ನು ಗೆದ್ದು ಮತ್ತೊಂದು ಪಂದ್ಯವನ್ನು ಡ್ರಾ ಮಾಡಿಕೊಂಡು ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಮತ್ತೊಮ್ಮೆ ವಶಕ್ಕೆ ಪಡೆಯಲು ಯಶಸ್ವಿಯಾಗಿತ್ತು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm