ಬ್ರೇಕಿಂಗ್ ನ್ಯೂಸ್
01-02-21 04:11 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಸಾಧಿಸಿದ ದಿಗ್ವಿಜಯ ಕ್ರಿಕೆಟ್ ಪ್ರೇಮಿಗಳಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುಂತಾ ಕ್ಷಣ. ಆಸಿಸ್ ನೆಲದಲ್ಲಿ ಭಾರತ ಸರಣಿ ಗೆದ್ದ ರೀತಿಗೆ ವಿಶ್ವ ಕ್ರಿಕೆಟ್ ಲೋಕವೇ ತಲೆದೂಗಿದೆ. ಈಗ ಈ ಗೆಲುವಿನ ಸಾಹಸಗಾಥೆ ಭಾರತದ ಕೇಂದ್ರ ಸರ್ಕಾರದ ಬಜೆಟ್ ಭಾಷಣದ ವೇಳೆಯಲ್ಲಿಯೂ ಉಲ್ಲೇಖವಾಗಿದೆ.
ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಬಜೆಟ್ಅನ್ನು ಪಾರ್ಲಿಮೆಂಟ್ನಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ಕ್ರಿಕೆಟ್ ತಂಡ ಸಾಧಿಸಿದ ಅಮೋಘ ಜಯವನ್ನು ನಿರ್ಮಲಾ ಸೀತಾರಾಮನ್ ಅವರು ಉದಾಹರಣೆಯಾಗಿ ನೀಡಿದರು.
ಕ್ರಿಕೆಟ್ಅನ್ನು ಪ್ರೀತಿಸುವ ದೇಶವಾಗಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಸ್ಮರಿಸಿಕೊಳ್ಳುತ್ತೇನೆ" ಎಂದು ನಿರ್ಮಲಾ ಸೀತಾರಾಮನ್ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ವಶಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ ಸಾಧನೆಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು. "ಈ ಗೆಲುವು ನಮಗೆ ವ್ಯಕ್ತಿಗಳಾಗಿ ನಾವು ಅದರಲ್ಲೂ ವಿಶೇಷವಾಗಿ ನಮ್ಮ ಯುವಕರು ಹೊಂದಿರುವ ಸಾಮರ್ಥ್ಯ ಹಾಗೂ ಗೆಲುವನ್ನು ಪಡೆಯುವ ಸಲುವಾಗಿ ಹೇರಳವಾದ ಭರವಸೆಯನ್ನು ನಮಗೆ ನೆನಪಿಸಿದೆ" ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೀಮ್ ಇಂಡಿಯಾ ಮೊದಲ ಟೆಸ್ಟ್ನಲ್ಲಿ 36 ರನ್ಗೆ ಎರಡನೇ ಇನ್ನಿಂಗ್ಸ್ನಲ್ಲಿ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಆದರೆ ಈ ಸೋಲಿನಿಂದ ಅದ್ಭುತವಾಗಿ ತಿರುಗಿ ಬೀಳಲು ಯಶಸ್ವಿಯಾದ ತಂಡ ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಪಂದ್ಯವನ್ನು ಗೆದ್ದು ಮತ್ತೊಂದು ಪಂದ್ಯವನ್ನು ಡ್ರಾ ಮಾಡಿಕೊಂಡು ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಮತ್ತೊಮ್ಮೆ ವಶಕ್ಕೆ ಪಡೆಯಲು ಯಶಸ್ವಿಯಾಗಿತ್ತು.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am