ಬ್ರೇಕಿಂಗ್ ನ್ಯೂಸ್
01-02-21 05:17 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ತಿಂಗಳು ಮೊದಲನೇ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಹೆತ್ತವರಾದ ಸಂಭ್ರಮದಲ್ಲಿರುವ ಈ ದಂಪತಿ ಈಗ ಮಗುವಿನ ಹೆಸರನ್ನು ಘೋಷಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪುತ್ರಿಯ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಪುತ್ರಿಗೆ "ವಮಿಕಾ" ಎಂದು ನಾಮಕರಣ ಮಾಡಿದ್ದಾರೆ. ಫೋಟೋ ಜೊತೆಗೆ ಸುಂದರ ಸಾಲುಗಳನ್ನು ಬರೆದುಕೊಂಡು ಅನುಷ್ಕಾ ತಮ್ಮ ಪುತ್ರಿಯ ಹೆಸರನ್ನು ಮೊದಲ ಬಾರಿಗೆ ಅಭಿಮಾನಿಗಳೊಂದಿಗೆ ಹಂಚಿಕೊಂಡದ್ದಾರೆ.
"ನಾವು ಪ್ರೀತಿ, ಕೃತಜ್ಞತೆ ಉಪಸ್ಥಿತಿಯೊಂದಿಗೆ ಜೊತೆಯಾಗಿ ವಾಸಿಸುತ್ತಿದ್ದೇವೆ. ಆದರೆ ಈಗ ಪುಟ್ಟ ವಮಿಕಾ ಅದನ್ನು ಇನ್ನೊಂದು ಮಟ್ಟಕ್ಕೆ ತೆಗದುಕೊಂಡು ಹೋಗುತ್ತಿದ್ದಾಳೆ. ಕಣ್ಣೀರು, ನಗು, ಚಿಂತೆ, ಆನಂದ ಕೆಲವೊಮ್ಮೆ ನಿಮಿಷಗಳ ಅಂತರದಲ್ಲಿ ಅನುಭವಿಸಿದ ಭಾವನೆಗಳು" ಎಂದು ಅನುಷ್ಕಾ ಶರ್ಮಾ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಈ ಎಲ್ಲಾ ಭಾವನೆಗಳಿಗಿಂತ ಪುತ್ರಿಯ ಸಾಂಗತ್ಯ ಮಿಗಿಲು ಎಂಬರ್ಥದ ಸಾಲುಗಳನ್ನು ಅನುಷ್ಕಾ ಶರ್ಮ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಸದ್ಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಸದ್ಯ ಚೆನ್ನೈಗೆ ಬಂದಿಳಿದಿರುವ ವಿರಾಟ್ ಕೊಹ್ಲಿ ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಫೆಬ್ರವರಿ 5ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ವಿರಾಟ್ ಮತ್ತೆ ಟೀಮ್ ಇಂಡಿಯಾದ ಚುಕ್ಕಾಣಿ ಹಿಡಿಯಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಡಿಲೇಡ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪಾಲ್ಗೊಂಡ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದರು. ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದ ವಿರಾಟ್ ಕೊಹ್ಲಿ ಆಸಿಸ್ ವಿರುದ್ಧದ ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಜನವರಿ 11ರಂದು ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
This News Article is a Copy of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am