ಬ್ರೇಕಿಂಗ್ ನ್ಯೂಸ್
01-02-21 05:17 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ತಿಂಗಳು ಮೊದಲನೇ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಹೆತ್ತವರಾದ ಸಂಭ್ರಮದಲ್ಲಿರುವ ಈ ದಂಪತಿ ಈಗ ಮಗುವಿನ ಹೆಸರನ್ನು ಘೋಷಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪುತ್ರಿಯ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಪುತ್ರಿಗೆ "ವಮಿಕಾ" ಎಂದು ನಾಮಕರಣ ಮಾಡಿದ್ದಾರೆ. ಫೋಟೋ ಜೊತೆಗೆ ಸುಂದರ ಸಾಲುಗಳನ್ನು ಬರೆದುಕೊಂಡು ಅನುಷ್ಕಾ ತಮ್ಮ ಪುತ್ರಿಯ ಹೆಸರನ್ನು ಮೊದಲ ಬಾರಿಗೆ ಅಭಿಮಾನಿಗಳೊಂದಿಗೆ ಹಂಚಿಕೊಂಡದ್ದಾರೆ.
"ನಾವು ಪ್ರೀತಿ, ಕೃತಜ್ಞತೆ ಉಪಸ್ಥಿತಿಯೊಂದಿಗೆ ಜೊತೆಯಾಗಿ ವಾಸಿಸುತ್ತಿದ್ದೇವೆ. ಆದರೆ ಈಗ ಪುಟ್ಟ ವಮಿಕಾ ಅದನ್ನು ಇನ್ನೊಂದು ಮಟ್ಟಕ್ಕೆ ತೆಗದುಕೊಂಡು ಹೋಗುತ್ತಿದ್ದಾಳೆ. ಕಣ್ಣೀರು, ನಗು, ಚಿಂತೆ, ಆನಂದ ಕೆಲವೊಮ್ಮೆ ನಿಮಿಷಗಳ ಅಂತರದಲ್ಲಿ ಅನುಭವಿಸಿದ ಭಾವನೆಗಳು" ಎಂದು ಅನುಷ್ಕಾ ಶರ್ಮಾ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಈ ಎಲ್ಲಾ ಭಾವನೆಗಳಿಗಿಂತ ಪುತ್ರಿಯ ಸಾಂಗತ್ಯ ಮಿಗಿಲು ಎಂಬರ್ಥದ ಸಾಲುಗಳನ್ನು ಅನುಷ್ಕಾ ಶರ್ಮ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಸದ್ಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಸದ್ಯ ಚೆನ್ನೈಗೆ ಬಂದಿಳಿದಿರುವ ವಿರಾಟ್ ಕೊಹ್ಲಿ ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಫೆಬ್ರವರಿ 5ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ವಿರಾಟ್ ಮತ್ತೆ ಟೀಮ್ ಇಂಡಿಯಾದ ಚುಕ್ಕಾಣಿ ಹಿಡಿಯಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಡಿಲೇಡ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪಾಲ್ಗೊಂಡ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದರು. ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದ ವಿರಾಟ್ ಕೊಹ್ಲಿ ಆಸಿಸ್ ವಿರುದ್ಧದ ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಜನವರಿ 11ರಂದು ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm