ಬ್ರೇಕಿಂಗ್ ನ್ಯೂಸ್
02-02-21 02:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಹೆಸರಿಸಿರುವ ತಂಡದಲ್ಲಿ ವೇಗಿ ನಟರಾಜನ್ ಆಯ್ಕೆಯಾಗಿಲ್ಲ. ಹೀಗಾಗಿ ನಟರಾಜನ್ ಸದ್ಯ ತಮಿಳುನಾಡಿನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ಬಳಗವನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ವತಃ ನಟರಾಜನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲೂ ಅವಕಾಶ ಪಡೆದಿದ್ದ ನಟರಾಜನ್ ಸುದೀರ್ಘ ಕಾಲ ತಂಡದ ಸದಸ್ಯರ ಜೊತೆಯಲ್ಲಿ ಬಯೋ ಬಬಲ್ನಲ್ಲಿದ್ದರು. ಆದರೆ ಜನವರಿ ಮಧ್ಯದಲ್ಲಿ ಆಸಿಸ್ ವಿರುದ್ಧದ ಸರಣಿ ಮುಕ್ತಾಯದೊದಿಗೆ ಟೀಮ್ ಇಂಡಿಯಾ ತವರಿಗೆ ಮರಳಿತು.
"ಕಳೆದ ಕಲ ತಿಂಗಳುಗಳಿಂದ ತಂಡದ ಭಾಗವಾಗಿದ್ದು ಸದಸ್ಯರ ಜೊತೆಯಲ್ಲಿ ಆತ್ಮೀಯವಾಗಿದ್ದೆ. ಈಗ ಖಂಡಿತವಾಗಿ ತಂಡವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಈ ವಿರಾಮದ ಅಗತ್ಯವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಕಳೆದ ಆರು ತಿಂಗಳಿನಿಂದ ನಾನು ನನ್ನ ಕುಟುಂಬಕ್ಕೆ ಸಮಯವನ್ನು ನೀಡಿರಲಿಲ್ಲ. ಆದರೆ ಅದಕ್ಕೆ ಬೇಸರವಿಲ್ಲ. ಆದರೆ ತಂಡ ಚೆನ್ನೈನಲ್ಲಿ ಆಡುತ್ತಿರುವಾಗ ನಾನು ರಾಷ್ಟ್ರೀಯ ತಂಡದ ಭಾಗವಾಗದಿರುವ ಬಗ್ಗೆ ಖಂಡಿತಾ ನನಗೆ ಬೇಸರವಿದೆ" ಎಂದಿದ್ದಾರೆ ನಟರಾಜನ್. ಇನ್ನು ಇದೇ ಸಂದರ್ಭದಲ್ಲಿ ನಟರಾಜನ್ ಎಲ್ಲಾ ಮಾದರಿಯ ತಂಡದಲ್ಲೂ ಟೀಮ್ ಇಂಡಿಯಾದ ಭಾಗವಾಗಲು ಇಷ್ಟ ಪಡುತ್ತೇನೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಕೆಲಸದ ಒತ್ತಡವನ್ನೂ ನಿಭಾಯಿಸಿಕೊಳ್ಳುತ್ತೇನೆ ಎಂದು ನಟರಾಜನ್ ಹೇಳಿದ್ದಾರೆ.
"ನಾನು ಎಲ್ಲಾ ಮಾದರಿಯಲ್ಲೂ ಆಡುವ ಜೊತೆಗೆ ಕೆಲಸದ ಒತ್ತಡವನ್ನು ನಿಭಾಯಿಸುವತ್ತ ಗಮನಹರಿಸುತ್ತಿದ್ದೇನೆ. ನನ್ನ ಸಾಮರ್ಥ್ಯ ಹಾಗೂ ಸಹನೆಯ ಮಟ್ಟವನ್ನು ಏರಿಸಲು ಮುಮದಿನ ದಿನಗಳಲ್ಲಿ ಬಯಸುತ್ತೇನೆ. ನಾನು ನನ್ನ ಜೋವನದಲ್ಲಿ ಇದೇ ಮೊದಲ ಬಾರಿಗೆ ಸುದೀರ್ಘ 6 ತಿಂಗಳುಗಳ ಕಾಲ ನಿರಂತರವಾಗಿ ಆಡಿದ್ದು ಇದೇ ಮೊದಲು" ಎಂದು ನಟರಾಜನ್ ಹೇಳಿದರು.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm