ಬ್ರೇಕಿಂಗ್ ನ್ಯೂಸ್
02-02-21 02:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಹೆಸರಿಸಿರುವ ತಂಡದಲ್ಲಿ ವೇಗಿ ನಟರಾಜನ್ ಆಯ್ಕೆಯಾಗಿಲ್ಲ. ಹೀಗಾಗಿ ನಟರಾಜನ್ ಸದ್ಯ ತಮಿಳುನಾಡಿನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ಬಳಗವನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ವತಃ ನಟರಾಜನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲೂ ಅವಕಾಶ ಪಡೆದಿದ್ದ ನಟರಾಜನ್ ಸುದೀರ್ಘ ಕಾಲ ತಂಡದ ಸದಸ್ಯರ ಜೊತೆಯಲ್ಲಿ ಬಯೋ ಬಬಲ್ನಲ್ಲಿದ್ದರು. ಆದರೆ ಜನವರಿ ಮಧ್ಯದಲ್ಲಿ ಆಸಿಸ್ ವಿರುದ್ಧದ ಸರಣಿ ಮುಕ್ತಾಯದೊದಿಗೆ ಟೀಮ್ ಇಂಡಿಯಾ ತವರಿಗೆ ಮರಳಿತು.
"ಕಳೆದ ಕಲ ತಿಂಗಳುಗಳಿಂದ ತಂಡದ ಭಾಗವಾಗಿದ್ದು ಸದಸ್ಯರ ಜೊತೆಯಲ್ಲಿ ಆತ್ಮೀಯವಾಗಿದ್ದೆ. ಈಗ ಖಂಡಿತವಾಗಿ ತಂಡವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಈ ವಿರಾಮದ ಅಗತ್ಯವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಕಳೆದ ಆರು ತಿಂಗಳಿನಿಂದ ನಾನು ನನ್ನ ಕುಟುಂಬಕ್ಕೆ ಸಮಯವನ್ನು ನೀಡಿರಲಿಲ್ಲ. ಆದರೆ ಅದಕ್ಕೆ ಬೇಸರವಿಲ್ಲ. ಆದರೆ ತಂಡ ಚೆನ್ನೈನಲ್ಲಿ ಆಡುತ್ತಿರುವಾಗ ನಾನು ರಾಷ್ಟ್ರೀಯ ತಂಡದ ಭಾಗವಾಗದಿರುವ ಬಗ್ಗೆ ಖಂಡಿತಾ ನನಗೆ ಬೇಸರವಿದೆ" ಎಂದಿದ್ದಾರೆ ನಟರಾಜನ್. ಇನ್ನು ಇದೇ ಸಂದರ್ಭದಲ್ಲಿ ನಟರಾಜನ್ ಎಲ್ಲಾ ಮಾದರಿಯ ತಂಡದಲ್ಲೂ ಟೀಮ್ ಇಂಡಿಯಾದ ಭಾಗವಾಗಲು ಇಷ್ಟ ಪಡುತ್ತೇನೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಕೆಲಸದ ಒತ್ತಡವನ್ನೂ ನಿಭಾಯಿಸಿಕೊಳ್ಳುತ್ತೇನೆ ಎಂದು ನಟರಾಜನ್ ಹೇಳಿದ್ದಾರೆ.
"ನಾನು ಎಲ್ಲಾ ಮಾದರಿಯಲ್ಲೂ ಆಡುವ ಜೊತೆಗೆ ಕೆಲಸದ ಒತ್ತಡವನ್ನು ನಿಭಾಯಿಸುವತ್ತ ಗಮನಹರಿಸುತ್ತಿದ್ದೇನೆ. ನನ್ನ ಸಾಮರ್ಥ್ಯ ಹಾಗೂ ಸಹನೆಯ ಮಟ್ಟವನ್ನು ಏರಿಸಲು ಮುಮದಿನ ದಿನಗಳಲ್ಲಿ ಬಯಸುತ್ತೇನೆ. ನಾನು ನನ್ನ ಜೋವನದಲ್ಲಿ ಇದೇ ಮೊದಲ ಬಾರಿಗೆ ಸುದೀರ್ಘ 6 ತಿಂಗಳುಗಳ ಕಾಲ ನಿರಂತರವಾಗಿ ಆಡಿದ್ದು ಇದೇ ಮೊದಲು" ಎಂದು ನಟರಾಜನ್ ಹೇಳಿದರು.
This News Article is a Copy of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am