ಬ್ರೇಕಿಂಗ್ ನ್ಯೂಸ್
02-02-21 02:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಹೆಸರಿಸಿರುವ ತಂಡದಲ್ಲಿ ವೇಗಿ ನಟರಾಜನ್ ಆಯ್ಕೆಯಾಗಿಲ್ಲ. ಹೀಗಾಗಿ ನಟರಾಜನ್ ಸದ್ಯ ತಮಿಳುನಾಡಿನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ಬಳಗವನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ವತಃ ನಟರಾಜನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲೂ ಅವಕಾಶ ಪಡೆದಿದ್ದ ನಟರಾಜನ್ ಸುದೀರ್ಘ ಕಾಲ ತಂಡದ ಸದಸ್ಯರ ಜೊತೆಯಲ್ಲಿ ಬಯೋ ಬಬಲ್ನಲ್ಲಿದ್ದರು. ಆದರೆ ಜನವರಿ ಮಧ್ಯದಲ್ಲಿ ಆಸಿಸ್ ವಿರುದ್ಧದ ಸರಣಿ ಮುಕ್ತಾಯದೊದಿಗೆ ಟೀಮ್ ಇಂಡಿಯಾ ತವರಿಗೆ ಮರಳಿತು.
"ಕಳೆದ ಕಲ ತಿಂಗಳುಗಳಿಂದ ತಂಡದ ಭಾಗವಾಗಿದ್ದು ಸದಸ್ಯರ ಜೊತೆಯಲ್ಲಿ ಆತ್ಮೀಯವಾಗಿದ್ದೆ. ಈಗ ಖಂಡಿತವಾಗಿ ತಂಡವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಈ ವಿರಾಮದ ಅಗತ್ಯವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಕಳೆದ ಆರು ತಿಂಗಳಿನಿಂದ ನಾನು ನನ್ನ ಕುಟುಂಬಕ್ಕೆ ಸಮಯವನ್ನು ನೀಡಿರಲಿಲ್ಲ. ಆದರೆ ಅದಕ್ಕೆ ಬೇಸರವಿಲ್ಲ. ಆದರೆ ತಂಡ ಚೆನ್ನೈನಲ್ಲಿ ಆಡುತ್ತಿರುವಾಗ ನಾನು ರಾಷ್ಟ್ರೀಯ ತಂಡದ ಭಾಗವಾಗದಿರುವ ಬಗ್ಗೆ ಖಂಡಿತಾ ನನಗೆ ಬೇಸರವಿದೆ" ಎಂದಿದ್ದಾರೆ ನಟರಾಜನ್. ಇನ್ನು ಇದೇ ಸಂದರ್ಭದಲ್ಲಿ ನಟರಾಜನ್ ಎಲ್ಲಾ ಮಾದರಿಯ ತಂಡದಲ್ಲೂ ಟೀಮ್ ಇಂಡಿಯಾದ ಭಾಗವಾಗಲು ಇಷ್ಟ ಪಡುತ್ತೇನೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಕೆಲಸದ ಒತ್ತಡವನ್ನೂ ನಿಭಾಯಿಸಿಕೊಳ್ಳುತ್ತೇನೆ ಎಂದು ನಟರಾಜನ್ ಹೇಳಿದ್ದಾರೆ.
"ನಾನು ಎಲ್ಲಾ ಮಾದರಿಯಲ್ಲೂ ಆಡುವ ಜೊತೆಗೆ ಕೆಲಸದ ಒತ್ತಡವನ್ನು ನಿಭಾಯಿಸುವತ್ತ ಗಮನಹರಿಸುತ್ತಿದ್ದೇನೆ. ನನ್ನ ಸಾಮರ್ಥ್ಯ ಹಾಗೂ ಸಹನೆಯ ಮಟ್ಟವನ್ನು ಏರಿಸಲು ಮುಮದಿನ ದಿನಗಳಲ್ಲಿ ಬಯಸುತ್ತೇನೆ. ನಾನು ನನ್ನ ಜೋವನದಲ್ಲಿ ಇದೇ ಮೊದಲ ಬಾರಿಗೆ ಸುದೀರ್ಘ 6 ತಿಂಗಳುಗಳ ಕಾಲ ನಿರಂತರವಾಗಿ ಆಡಿದ್ದು ಇದೇ ಮೊದಲು" ಎಂದು ನಟರಾಜನ್ ಹೇಳಿದರು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm