ಬ್ರೇಕಿಂಗ್ ನ್ಯೂಸ್
02-02-21 02:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಹೆಸರಿಸಿರುವ ತಂಡದಲ್ಲಿ ವೇಗಿ ನಟರಾಜನ್ ಆಯ್ಕೆಯಾಗಿಲ್ಲ. ಹೀಗಾಗಿ ನಟರಾಜನ್ ಸದ್ಯ ತಮಿಳುನಾಡಿನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ಬಳಗವನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ವತಃ ನಟರಾಜನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲೂ ಅವಕಾಶ ಪಡೆದಿದ್ದ ನಟರಾಜನ್ ಸುದೀರ್ಘ ಕಾಲ ತಂಡದ ಸದಸ್ಯರ ಜೊತೆಯಲ್ಲಿ ಬಯೋ ಬಬಲ್ನಲ್ಲಿದ್ದರು. ಆದರೆ ಜನವರಿ ಮಧ್ಯದಲ್ಲಿ ಆಸಿಸ್ ವಿರುದ್ಧದ ಸರಣಿ ಮುಕ್ತಾಯದೊದಿಗೆ ಟೀಮ್ ಇಂಡಿಯಾ ತವರಿಗೆ ಮರಳಿತು.
"ಕಳೆದ ಕಲ ತಿಂಗಳುಗಳಿಂದ ತಂಡದ ಭಾಗವಾಗಿದ್ದು ಸದಸ್ಯರ ಜೊತೆಯಲ್ಲಿ ಆತ್ಮೀಯವಾಗಿದ್ದೆ. ಈಗ ಖಂಡಿತವಾಗಿ ತಂಡವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಈ ವಿರಾಮದ ಅಗತ್ಯವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಕಳೆದ ಆರು ತಿಂಗಳಿನಿಂದ ನಾನು ನನ್ನ ಕುಟುಂಬಕ್ಕೆ ಸಮಯವನ್ನು ನೀಡಿರಲಿಲ್ಲ. ಆದರೆ ಅದಕ್ಕೆ ಬೇಸರವಿಲ್ಲ. ಆದರೆ ತಂಡ ಚೆನ್ನೈನಲ್ಲಿ ಆಡುತ್ತಿರುವಾಗ ನಾನು ರಾಷ್ಟ್ರೀಯ ತಂಡದ ಭಾಗವಾಗದಿರುವ ಬಗ್ಗೆ ಖಂಡಿತಾ ನನಗೆ ಬೇಸರವಿದೆ" ಎಂದಿದ್ದಾರೆ ನಟರಾಜನ್. ಇನ್ನು ಇದೇ ಸಂದರ್ಭದಲ್ಲಿ ನಟರಾಜನ್ ಎಲ್ಲಾ ಮಾದರಿಯ ತಂಡದಲ್ಲೂ ಟೀಮ್ ಇಂಡಿಯಾದ ಭಾಗವಾಗಲು ಇಷ್ಟ ಪಡುತ್ತೇನೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಕೆಲಸದ ಒತ್ತಡವನ್ನೂ ನಿಭಾಯಿಸಿಕೊಳ್ಳುತ್ತೇನೆ ಎಂದು ನಟರಾಜನ್ ಹೇಳಿದ್ದಾರೆ.
"ನಾನು ಎಲ್ಲಾ ಮಾದರಿಯಲ್ಲೂ ಆಡುವ ಜೊತೆಗೆ ಕೆಲಸದ ಒತ್ತಡವನ್ನು ನಿಭಾಯಿಸುವತ್ತ ಗಮನಹರಿಸುತ್ತಿದ್ದೇನೆ. ನನ್ನ ಸಾಮರ್ಥ್ಯ ಹಾಗೂ ಸಹನೆಯ ಮಟ್ಟವನ್ನು ಏರಿಸಲು ಮುಮದಿನ ದಿನಗಳಲ್ಲಿ ಬಯಸುತ್ತೇನೆ. ನಾನು ನನ್ನ ಜೋವನದಲ್ಲಿ ಇದೇ ಮೊದಲ ಬಾರಿಗೆ ಸುದೀರ್ಘ 6 ತಿಂಗಳುಗಳ ಕಾಲ ನಿರಂತರವಾಗಿ ಆಡಿದ್ದು ಇದೇ ಮೊದಲು" ಎಂದು ನಟರಾಜನ್ ಹೇಳಿದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm