ಬ್ರೇಕಿಂಗ್ ನ್ಯೂಸ್
03-02-21 05:14 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಶ್ರೇಷ್ಠ ಮಟ್ಟದ ಪ್ರದರ್ಶನವನ್ನು ನೀಡಿ ಐತಿಹಾಸಿಕ ಸರಣಿ ಗೆಲುವನ್ನು ಸಾಧಿಸಿತ್ತು, ಆದರೆ ಆ ಗೆಲುವನ್ನು ಭಾರತ ಈಗ ಮರೆತು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಹೊಸತಾಗಿ ಆರಂಭವನ್ನು ಪಡೆಯಬೇಕು ಎಂಬ ಸಲಹೆಯನ್ನು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ನೀಡಿದ್ದಾರೆ.
"ಭಾರತಕ್ಕೆ ಇದು ಹೊಸ ಸರಣಿ. ಆಸ್ಟ್ರೇಲಿಯಾದಲ್ಲಿ ಏನು ನಡೆದಿದೆಯೋ ಅದನ್ನು ಟೀಮ್ ಇಂಡಿಯಾ ಆಟಗಾರರು ಮರೆಯಬೇಕು. ಇಂಗ್ಲೆಂಡ್ ವಿರುದ್ಧ ಅವರು ಹೊಸತಾಗಿ ಆರಂಭಿಸಬೇಕಿದೆ" ಎಂದು ವಾಸಿಂ ಜಾಫರ್ ಇಂಗ್ಲೆಂಡ್ ವಿರುದ್ಧದ ಸರಣಿಯ ಬಗ್ಗೆ ಸಲಹೆ ನೀಡಿದ್ದಾರೆ.
"ಭಾರತಕ್ಕೆ ಖಂಡಿತವಾಗಿಯೂ ತವರು ಅಂಗಳದ ಲಾಭವನ್ನು ಪಡೆದುಕೊಳ್ಳಲಿದೆ. ಆದರೆ ಯಾವುದನ್ನೂ ಹಗುರವಾಗಿ ತೆಗೆದುಕೊಳ್ಳುವಂತಿಲ್ಲ. ಆಸ್ಟ್ರೇಲಿಯಾದಲ್ಲಿ ನಡೆದಿರುವುದನ್ನು ನೀವು ಬಿಡಬೇಕಾಗುತ್ತದೆ. ಆ ಆತ್ಮವಿಶ್ವಾಸವನ್ನು ಮುಂದುವರಿಸಿಕೊಂಡು ಹೊಸ ಆರಂಭವನ್ನು ಪಡೆಯಬೇಕು" ಎಂದು ವಾಸಿಂಗ್ ಜಾಫರ್ ಪ್ರತಿಕ್ರಿಯಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಭಾರತೀಯ ಯುವ ಆಟಗಾರರ ಬಗ್ಗೆ ವಾಸಿಂಗ್ ಜಾಫರ್ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಶುಬ್ಮನ್ ಗಿಲ್ ಹಾಗೂ ರಿಷಭ್ ಪಂತ್ ಪ್ರದರ್ಶನವನ್ನು ಕೊಂಡಾಡಿದ ಜಾಫರ್ ಆಸ್ಟ್ರೇಲಿಯಾ ನೆಲದಲ್ಲಿ ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ಟೆಸ್ಟ್ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸುತ್ತಾರೆ ಎಂದು ಊಹೆಯನ್ನೂ ಮಾಡಿರಲಿಲ್ಲ ಎಂದಿದ್ದಾರೆ.
"ಐಪಿಎಲ್ಗೆ ಮುನ್ನ ನಟರಾಜನ್ ಟೀಮ್ ಇಂಡಿಯಾಗೆ ಮೂರು ಮಾದರಿಯಲ್ಲೂ ಪದಾರ್ಪಣೆಯನ್ನು ಮಾಡಲಿದ್ದಾರೆ ಎಂದು ಯಾರು ಊಹಿಸಲು ಸಾಧ್ಯವಿತ್ತು. ಅವರೆಲ್ಲರೂ ಶ್ರೇಷ್ಠವಾದ ಪ್ರದರ್ಶನವನ್ನು ನೀಡಿದ್ದಾರೆ. ಅದು ಯುವ ಆಟಗಾರರ ಅದ್ಭುತವಾದ ಪ್ರದರ್ಶನ. ನನಗೆ ಈ ಹುಡುಗರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಅದ್ಭುತವಾಗಿ ಆಡಲಿದ್ದಾರೆ ಎಂಬ ಸಂಪೂರ್ಣ ಭರವಸೆಯಿದೆ" ಎಂದು ಮಾಜಿ ಆರಂಭಿಕ ಆಟಗಾರ ವಾಸಿಂ ಜಾಫರ್ ಟೀಮ್ ಇಂಡಿಯಾ ಆಟಗಾರರ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm