ಬ್ರೇಕಿಂಗ್ ನ್ಯೂಸ್
03-02-21 05:14 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಶ್ರೇಷ್ಠ ಮಟ್ಟದ ಪ್ರದರ್ಶನವನ್ನು ನೀಡಿ ಐತಿಹಾಸಿಕ ಸರಣಿ ಗೆಲುವನ್ನು ಸಾಧಿಸಿತ್ತು, ಆದರೆ ಆ ಗೆಲುವನ್ನು ಭಾರತ ಈಗ ಮರೆತು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಹೊಸತಾಗಿ ಆರಂಭವನ್ನು ಪಡೆಯಬೇಕು ಎಂಬ ಸಲಹೆಯನ್ನು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ನೀಡಿದ್ದಾರೆ.
"ಭಾರತಕ್ಕೆ ಇದು ಹೊಸ ಸರಣಿ. ಆಸ್ಟ್ರೇಲಿಯಾದಲ್ಲಿ ಏನು ನಡೆದಿದೆಯೋ ಅದನ್ನು ಟೀಮ್ ಇಂಡಿಯಾ ಆಟಗಾರರು ಮರೆಯಬೇಕು. ಇಂಗ್ಲೆಂಡ್ ವಿರುದ್ಧ ಅವರು ಹೊಸತಾಗಿ ಆರಂಭಿಸಬೇಕಿದೆ" ಎಂದು ವಾಸಿಂ ಜಾಫರ್ ಇಂಗ್ಲೆಂಡ್ ವಿರುದ್ಧದ ಸರಣಿಯ ಬಗ್ಗೆ ಸಲಹೆ ನೀಡಿದ್ದಾರೆ.
"ಭಾರತಕ್ಕೆ ಖಂಡಿತವಾಗಿಯೂ ತವರು ಅಂಗಳದ ಲಾಭವನ್ನು ಪಡೆದುಕೊಳ್ಳಲಿದೆ. ಆದರೆ ಯಾವುದನ್ನೂ ಹಗುರವಾಗಿ ತೆಗೆದುಕೊಳ್ಳುವಂತಿಲ್ಲ. ಆಸ್ಟ್ರೇಲಿಯಾದಲ್ಲಿ ನಡೆದಿರುವುದನ್ನು ನೀವು ಬಿಡಬೇಕಾಗುತ್ತದೆ. ಆ ಆತ್ಮವಿಶ್ವಾಸವನ್ನು ಮುಂದುವರಿಸಿಕೊಂಡು ಹೊಸ ಆರಂಭವನ್ನು ಪಡೆಯಬೇಕು" ಎಂದು ವಾಸಿಂಗ್ ಜಾಫರ್ ಪ್ರತಿಕ್ರಿಯಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಭಾರತೀಯ ಯುವ ಆಟಗಾರರ ಬಗ್ಗೆ ವಾಸಿಂಗ್ ಜಾಫರ್ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಶುಬ್ಮನ್ ಗಿಲ್ ಹಾಗೂ ರಿಷಭ್ ಪಂತ್ ಪ್ರದರ್ಶನವನ್ನು ಕೊಂಡಾಡಿದ ಜಾಫರ್ ಆಸ್ಟ್ರೇಲಿಯಾ ನೆಲದಲ್ಲಿ ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ಟೆಸ್ಟ್ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸುತ್ತಾರೆ ಎಂದು ಊಹೆಯನ್ನೂ ಮಾಡಿರಲಿಲ್ಲ ಎಂದಿದ್ದಾರೆ.
"ಐಪಿಎಲ್ಗೆ ಮುನ್ನ ನಟರಾಜನ್ ಟೀಮ್ ಇಂಡಿಯಾಗೆ ಮೂರು ಮಾದರಿಯಲ್ಲೂ ಪದಾರ್ಪಣೆಯನ್ನು ಮಾಡಲಿದ್ದಾರೆ ಎಂದು ಯಾರು ಊಹಿಸಲು ಸಾಧ್ಯವಿತ್ತು. ಅವರೆಲ್ಲರೂ ಶ್ರೇಷ್ಠವಾದ ಪ್ರದರ್ಶನವನ್ನು ನೀಡಿದ್ದಾರೆ. ಅದು ಯುವ ಆಟಗಾರರ ಅದ್ಭುತವಾದ ಪ್ರದರ್ಶನ. ನನಗೆ ಈ ಹುಡುಗರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಅದ್ಭುತವಾಗಿ ಆಡಲಿದ್ದಾರೆ ಎಂಬ ಸಂಪೂರ್ಣ ಭರವಸೆಯಿದೆ" ಎಂದು ಮಾಜಿ ಆರಂಭಿಕ ಆಟಗಾರ ವಾಸಿಂ ಜಾಫರ್ ಟೀಮ್ ಇಂಡಿಯಾ ಆಟಗಾರರ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am