ಬ್ರೇಕಿಂಗ್ ನ್ಯೂಸ್
15-08-20 08:22 pm Sports Correspondent ಕ್ರೀಡೆ
ನವದೆಹಲಿ, ಆಗಸ್ಟ್ 15: ಭಾರತ ಕ್ರಿಕೆಟ್ ತಂಡದ ಯಶಸ್ವಿ ನಾಯಕ, 2011ರ ವಿಶ್ವಕಪ್ ವಿಜೇತ ನಾಯಕ ಮಹೇಂದ್ರ ಸಿಂಗ್ ಧೋನಿ ಕೊನೆಗೂ ಮೌನ ಮುರಿದಿದ್ದಾರೆ. ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಕ್ಕೆ ವಿದಾಯ ಘೋಷಣೆ ಮಾಡಿದ್ದಾರೆ. ಇನ್ ಸ್ಟಾ ಗ್ರಾಮಿನಲ್ಲಿ ವಿದಾಯ ಪ್ರಕಟಿಸಿರುವ ಧೋನಿ, ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಧೋನಿ ರಿಟೈರ್ಮೆಂಟ್ ಬಗ್ಗೆ ವದಂತಿ ಹರಿದಾಡಿತ್ತು. ಧೋನಿ ನಿವೃತ್ತಿಯ ಬಗ್ಗೆ ಅಭಿಮಾನಿಗಳಂತೂ ನಿರಾಸೆ ವ್ಯಕ್ತಪಡಿಸಿದ್ದೂ ಆಗಿತ್ತು. ಕೊನೆಗೆ, ಧೋನಿ ಪತ್ನಿ ಸಾಕ್ಷಿ ಪ್ರತಿಕ್ರಿಯಿಸಿ ನಿವೃತ್ತಿಯ ವದಂತಿಗೆ ತೆರೆ ಎಳೆದಿದ್ದರು. ಆಬಳಿಕ ಧೋನಿಯ ಬಾಲ್ಯದ ಕೋಚ್ ಆಗಿದ್ದ ಕೇಶವ್ ಬ್ಯಾನರ್ಜಿ ಕೂಡ ಧೋನಿ ಈಗ ನಿವೃತ್ತಿಯಾಗುವ ಅವಶ್ಯಕತೆ ಇಲ್ಲ. ಅವರ ಸೇವೆ ಇನ್ನಷ್ಟು ಭಾರತ ತಂಡಕ್ಕೆ ಬೇಕು ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಸ್ವತಃ ಮಹೇಂದ್ರ ಸಿಂಗ್ ತಮ್ಮ ಕುರಿತು ಹರಿದಾಡಿದ್ದ ಸುದ್ದಿಗೆ ಅಂತಿಮ ಮುದ್ರೆ ಒತ್ತಿದ್ದಾರೆ.

2005ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಪದಾರ್ಪಣೆ ಮಾಡಿದ್ದ ಧೋನಿ, ಮಧ್ಯಮ ಕ್ರಮಾಂಕದಲ್ಲಿ ಅದ್ಭುತ ನಿರ್ವಹಣೆಯ ಮೂಲಕ ಭರವಸೆ ಮೂಡಿಸಿದ್ದರು. 2007ರಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡ ಧೋನಿಗೆ ವಿಶ್ವ ಕ್ರಿಕೆಟ್ ನಲ್ಲಿ ಅತ್ಯಂತ ಯಶಸ್ವೀ ನಾಯಕನಾಗಿ ಹೊರಹೊಮ್ಮಿದ್ದರು. 2007ರಲ್ಲೇ ಧೋನಿ ನಾಯಕತ್ವದಲ್ಲಿ ಭಾರತ ಟಿ ಟ್ವೆಂಟಿ ವಿಶ್ವ ಕಪ್ ಜಯಿಸಿದ್ದು ಅವರ ಕ್ಯಾಪ್ಟನ್ಸೀಗೆ ಮೆರುಗು ನೀಡಿತ್ತು. 2011ರಲ್ಲಿ ಭಾರತಕ್ಕೆ ಕಪಿಲ್ ದೇವ್ ಬಳಿಕ ಮತ್ತೊಮ್ಮೆ ಕ್ರಿಕೆಟ್ ವಿಶ್ವಕಪ್ ದಕ್ಕಿಸಿಕೊಟ್ಟಿದ್ದು ಧೋನಿ ನಾಯಕತ್ವ. ಅಮೋಘ ಬ್ಯಾಟಿಂಗ್ ಮತ್ತು ಕೀಪಿಂಗ್ ಅಲ್ಲದೆ ಕೂಲ್ ಆಗಿ ತಂಡವನ್ನು ಮುನ್ನಡೆಸುತ್ತಿದ್ದ ಛಾತಿ ಧೋನಿಯನ್ನು ಬಹುಬೇಗ ಕ್ರಿಕೆಟ್ ಪ್ರಿಯರ ಕಣ್ಮಣಿಯಾಗಿಸಿತ್ತು. 2010 ಮತ್ತು 2016ರಲ್ಲಿ ಏಶ್ಯಾಕಪ್ ಟ್ರೋಫಿ, 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟ ಶ್ರೇಯವೂ ಧೋನಿಯದ್ದು. ಚೇಸಿಂಗ್ ಸಂದರ್ಭದಲ್ಲಿ ಧೋನಿ ಕ್ರೀಸಿನಲ್ಲಿ ಇದ್ದಾರೆ ಅಂದ್ರೆ ಭಾರತದ ಗೆಲುವು ಶತಸ್ಸಿದ್ಧ ಅನ್ನುವಷ್ಟರ ಮಟ್ಟಿಗೆ ಕ್ರೀಸಿಗಂಟಿಕೊಂಡು ಆಡುವ ಛಾತಿಯುಳ್ಳ ವಿಶ್ವದ ಅತಿ ವಿರಳ ಕ್ರಿಕೆಟಿಗರಲ್ಲಿ ಧೋನಿ ಒಬ್ಬರು. ಫ್ಲ್ಯಾಟ್ ಸಿಕ್ಸ್ ಅಂತೂ ಧೋನಿ ಸಿಕ್ಸ್ ಅಂತಲೇ ಹೆಸರಾಗಿತ್ತು. ಎದುರಾಳಿ ತಂಡದಲ್ಲಿ ಯಾವುದೇ ಬೌಲರ್ ಆಗಿದ್ದರೂ, ಧೋನಿ ಕ್ರೀಸಿನಲ್ಲಿದ್ದರೆ ನಡುಗಿಕೊಂಡೇ ಬಾಲ್ ಮಾಡುವಷ್ಟರ ಮಟ್ಟಿಗೆ ಧೋನಿ ಬ್ಯಾಟಿಂಗ್ ವೈಭವ ಇತ್ತು.

ಇಂಥ ಅಪರೂಪದ ಕ್ರಿಕೆಟ್ ಮಾಂತ್ರಿಕ ಧೋನಿ ಜಾರ್ಖಂಡ್ ರಾಜ್ಯದ ಹಳ್ಳಿಗಾಡಿನ ಹುಡುಗ. ರಾಂಚಿಯಲ್ಲಿ ಎಮ್ಮೆಯ ಹಾಲು ಕುಡಿದೇ ಬೆಳೆದುಬಂದ ಧೋನಿ ಕ್ರಿಕೆಟಿನಲ್ಲಿ ಈ ಪರಿ ಆವರಿಸಿಕೊಂಡಿದ್ದೇ ಒಂದು ಅಚ್ಚರಿ. ಆದರೆ, ಭಾರತ ಕಂಡ ಅಪರೂಪದ ಆಟಗಾರನಿಗೆ ಕಳೆದ ನಾಲ್ಕೈದು ವರ್ಷಗಳಲ್ಲಿ ಹಿನ್ನಡೆ ಆಗಿತ್ತು. ಇದೇ ಕಾರಣಕ್ಕೆ 39ರ ಹರೆಯದ ಧೋನಿಯ ನಿವೃತ್ತಿ ಬಗ್ಗೆ ಮಾತುಗಳು ಹರಿದಾಡಿದ್ದವು. ಕೊಹ್ಲಿ ನಾಯಕನಾದ ಮೇಲಂತೂ ಆಟದಲ್ಲಿ ಕನ್ಸಿಸ್ಟೆನ್ಸಿ ಕಳಕೊಂಡ ಧೋನಿಯನ್ನು ಆಯ್ಕೆ ಸಂದರ್ಭದಲ್ಲಿಯೂ ಕಡೆಗಣಿಸಲಾಗಿತ್ತು. ಇದರಿಂದ ನೋವು ಅನುಭವಿಸಿದ್ದ ಧೋನಿ ಈಗ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟಿಗೆ ಗುಡ್ ಬೈ ಹೇಳಿದ್ದಾರೆ. ಐಪಿಎಲ್ ಸರಣಿಯಲ್ಲಿ ಮುಂದಯವರಿಯಲಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm