ಬ್ರೇಕಿಂಗ್ ನ್ಯೂಸ್
06-02-21 03:01 pm Source: MYKHEL Sadashiva ಕ್ರೀಡೆ
ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಆಟಗಾರರ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದ ಅರ್ಜುನ್ ಸದ್ಯ ಹರಾಜು ಕಣದಲ್ಲಿರುವ ಆಟಗಾರರ ಪಟ್ಟಿಯಲ್ಲಿದ್ದಾರೆ.
ಒಟ್ಟು 1097 ಮಂದಿ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದಾರೆ. ಹರಾಜಿಗೆ ನೋಂದಾಯಿಸಿಕೊಂಡ 1097 ಮಂದಿಯಲ್ಲಿ 814 ಮಂದಿ ಭಾರತೀಯರು, 283 ಜನ ವಿದೇಶಿಯರು. ಫೆಬ್ರವರಿ 4ರಂದು ಐಪಿಎಲ್ ಹರಾಜಿಗೆ ಆಟಗಾರರ ನೋಂದಾವಣೆ ಪ್ರಕ್ರಿಯೆ ಕೊನೆಗೊಂಡಿದೆ. ಫೆಬ್ರವರಿ 18ರಂದು ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ 3 pmಗೆ ಆರಂಭಗೊಳ್ಳಲಿದೆ. ಹರಾಜಿಗಾಗಿ ನೋಂದಾಯಿಸಿಕೊಂಡಿರುವ 1097 ಆಟಗಾರರಲ್ಲಿ ಒಬ್ಬರಾಗಿರುವ ಅರ್ಜುನ್ ತೆಂತೂಲ್ಕರ್ ಅವರ ಮೂಲ ಬೆಲೆ 20 ಲಕ್ಷ ರೂ. ಐಪಿಎಲ್ನಲ್ಲಿ ನಿಷೇಧಕ್ಕೀಡಾಗಿ ಮತ್ತೆ ವಾಪಸ್ಸಾತಿ ಮಾಡಲಿರುವ ಎಸ್ ಶ್ರೀಶಾಂತ್ ಮೂಲಬೆಲೆ 57 ಲಕ್ಷ ರೂ. ಚೇತೇಶ್ವರ ಪೂಜಾರ ಮೂಲಬೆಲೆ 75 ಲಕ್ಷ ರೂ.
ಸದ್ಯ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಪ್ರವಾಸ ಸರಣಿ ನಡೆಯುತ್ತಿದೆ. ಈ ಸರಣಿ ಬಳಿಕ ಐಪಿಎಲ್ 2021ರ ಆವೃತ್ತಿ ನಡೆಯಲಿದೆ. ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಮುಂಬರಲಿರುವ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಸ್ಪರ್ಧಿಯನ್ನೂ ನಿರ್ಧರಿಸಲಿದೆ. ಅಂದ್ಹಾಗೆ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮುಂಬೈ ಪರ 2 ಪಂದ್ಯಗಳಲ್ಲಿ 2 ವಿಕೆಟ್ ಪಡೆದಿದ್ದ ಅರ್ಜುನ್, 2017ರಲ್ಲಿ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡಕ್ಕೆ ನೆಟ್ ಬೌಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm