ಬ್ರೇಕಿಂಗ್ ನ್ಯೂಸ್
15-08-20 09:14 pm Sports Correspondent ಕ್ರೀಡೆ
ನವದೆಹಲಿ, ಆಗಸ್ಟ್ 15: ಅಂತಾರಾಷ್ಟ್ರೀಯ ಕ್ರಿಕೆಟಿಗೆ ಎಂ.ಎಸ್ ಧೋನಿ ನಿವೃತ್ತಿ ಘೋಷಿಸಿದ ಕೆಲವೇ ಹೊತ್ತಿನಲ್ಲಿ ಧೋನಿಯ ಗೆಳೆಯ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ.
ಸರಿಸುಮಾರು ಜೊತೆ ಜೊತೆಯಾಗೇ ಕ್ರಿಕೆಟಿಗೆ ಬಂದು ಮಧ್ಯಮ ಕ್ರಮಾಂಕದಲ್ಲಿ ಜೊತೆಯಾಗೇ ತಂಡವನ್ನು ದಡ ಸೇರಿಸುತ್ತಿದ್ದ ರೈನಾ ಮತ್ತು ಧೋನಿ ಒಂದೇ ದಿನ ಭಾರತ ಕ್ರಿಕೆಟ್ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದು ಕಾಕತಾಳೀಯ. ಧೋನಿ ನಿವೃತ್ತಿಯಿಂದ ಚಿಂತೆ ಆವರಿಸಿತೋ ಏನೋ.. ಅದೇ ಭಾವುಕತೆಯಲ್ಲಿ ರೈನಾ ವಿದಾಯ ಪ್ರಕಟಣೆಯನ್ನು ಮಾಡಿದ್ದಾರೆ.

"ನಿನ್ನೊಂದಿಗೆ ಅದ್ಭುತ ಆಟಗಳನ್ನು ಆಡಿರುವೆ, ಮಹೀ.. ನನ್ನ ಹೃದಯ ತುಂಬಿ ಬಂದಿದ್ದು ಕ್ರಿಕೆಟ್ ಜೀವನದ ಬಗ್ಗೆ ಹೆಮ್ಮೆ ಇದೆ. ನಿನ್ನ ಜೊತೆಗೇ ಕ್ರಿಕೆಟ್ ಜರ್ನಿಯನ್ನೂ ಮುಗಿಸಲು ಬಯಸುತ್ತೇನೆ. ಥ್ಯಾಂಕ್ಯು ಇಂಡಿಯಾ.. ಜೈ ಹಿಂದ್..!" ಎಂದು ಸುರೇಶ್ ರೈನಾ ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಬರೆದುಕೊಂಡಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಡುವ ರೈನಾ ಮತ್ತು ಧೋನಿ ಮುಂದಿನ ಐಪಿಎಲ್ ಸೀಸನಿಗಾಗಿ ತಯಾರಿಯಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡ ಅತ್ತ ದುಬೈಗೆ ಪಯಣ ಬೆಳೆಸುತ್ತಲೇ ಇತ್ತ ಇವರಿಬ್ಬರೂ ಚೆನ್ನೈನತ್ತ ತೆರಳಿದ್ದಾರೆ. ಐಪಿಎಲ್ ಪಂದ್ಯಕ್ಕಾಗಿ ಅಭ್ಯಾಸ ನಡೆಸಲು ಚೆನ್ನೈಗೆ ತೆರಳಿದ್ದಾರೆ ಎನ್ನಲಾಗ್ತಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am