ಬ್ರೇಕಿಂಗ್ ನ್ಯೂಸ್
08-02-21 03:44 pm Source: MYKHEL ಕ್ರೀಡೆ
ಗೋವಾ, ಫೆಬ್ರವರಿ 8: ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಮುಂಬೈ ಸಿಟಿ ಎಫ್ ಸಿ ಹಾಗೂ ಎಫ್ ಸಿ ಗೋವಾ ತಂಡಗಳು ಮುಖಾಮುಖಿಯಾಗುವುದರೊಂದಿಗೆ ಅನೇಕ ಅಂಕಿಅಂಶಗಳು ಪರಸ್ಪರ ತುಲನೆಗೆ ಒಳಗಾಗಲಿವೆ. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಇತ್ತಂಡಗಳೂ ಮುಖಾಮುಖಿಯಾಗಲಿವೆ.
ಮುಂಬೈ ಹಾಗೂ ಗೋವಾ ತಂಡಗಳು ಹೆಚ್ಚಿನ ಸಮಯ ಮೊದಲ ಹಾಗೂ ದ್ವಿತೀಯ ಸ್ಥಾನದಲ್ಲಿದ್ದವು, ಆದರೆ ಗೋವಾ ಈಗ ಮೂರನೇ ಸ್ಥಾನದಲ್ಲಿದೆ. ಗೋವಾ 11 ಅಂಕಗಳಿಂದ ಹಿಂದೆ ಬಿದ್ದಿದೆ. ಜುವಾನ್ ಫೆರಾಂಡೋ ಈಗ ಕೋಚ್ ಆಗಿರುವ ಗೋವಾ ತಂಡದ ಹಿಂದಿನ ಯಶಸ್ಸಿಗೆ ಸರ್ಗಿಯೊ ಲೊಬೆರಾ ಅವರು ಕಾರಣ. ಗೋವಾ ತಂಡ ಪ್ರತಿ ಪಂದ್ಯಕ್ಕೆ 58 ಶೇ, ದಂತೆ 489 ಪಾಸುಗಳನ್ನು ದಾಖಲಿಸಿದ್ದು , ಮುಂಬೈ 56 ಪ್ರತಿಶತದಂತೆ 486 ಪಾಸ್ ಗಳನ್ನು ದಾಖಲಿಸಿದೆ. 75.71 ಸರಾಸರಿಯೊಂದಿಗೆ ಮುಂಬೈ ಪಾಸಿಂಗ್ ನಿಖರತೆಯನ್ನು ಮುಂಬೈ ಹೊಂದಿದೆ. ಗೋವಾ 74.94 % ನಿಖರತೆ ಹೊಂದಿದೆ.
ಈ ಮೊದಲು ಇತ್ತಂಡಗಳು ಪರಸ್ಪರ ಮುಖಾಮುಖಿಯಾದಾಗ ಆ ಪಂದ್ಯದ ಬಗ್ಗೆ ನಿರೀಕ್ಷೆಗೂ ಮೀರಿದ ಸುದ್ದಿಯಾಗಿತ್ತು. ಆದರೆ ರೀಡಿಂ ತ್ಲಾಂಗ್ ಆರಂಭದಲ್ಲೇ ರೆಡ್ ಕಾರ್ಡ್ ಪಡೆದ ಕಾರಣ ಮುಂಬೈ ಮೇಲುಗೈ ಸಾಧಿಸಿತ್ತು. ಈಗ ಇತ್ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗುತ್ತಿದ್ದು, ಪಂದ್ಯದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿಕೊಂಡಿದೆ. ಮುಂಬೈತಂಡಕ್ಕೆ ಅಗ್ರ ಸ್ಥಾನವನ್ನು ಕಾಯ್ದುಕೊಳ್ಳು ಇಲ್ಲಿ ಜಯದ ಅಗತ್ಯ ಇದೆ. ಎಟಿಕೆ ಮೋಹನ್ ಬಾಗನ್ ತಂಡ ಮೂರು ಅಂಕಗಳಿಂದ ಹಿಂದೆ ಬಿದ್ದಿದೆ. ಗೋವಾ ತಂಡ ಕಳೆದ ಎಂಟು ಪಂದ್ಯಗಳಲ್ಲಿ ಸೋಲು ಕಂಡಿರಲಿಲ್ಲ. ಮಾಡಿ ತೋರಿಸುವುದಕ್ಕಿಂತ ಹೇಳುವುದೇ ಸುಲಭ ಎಂದು ಅವರಿಗೆ ಗೊತ್ತು. "ನಾವು ಒಂದು ಉತ್ತಮ ತಂಡದ ವಿರುದ್ಧ ಆಡಲಿದ್ದೇವೆ. ಅವರು ನಿಜವಾಗಿಯೂ ಒತ್ತಡದಲ್ಲಿದ್ದಾರೆ, ಏಕೆಂದರೆ ಅವರಿಗೆ ಪ್ಲೇ ಆಫ್ ತಲುಪಬೇಕಾಗಿದೆ. ಈ ಗುರಿಯನ್ನು ತಲುಪಲು ಹಲವು ತಂಡಗಳು ಸ್ಪರ್ಧೆಯಲ್ಲಿವೆ. ನಾವು ನಮ್ಮ ಬಗ್ಗೆ ಯೋಚಿಸುತ್ತಿದ್ದೇವೆ. ನಾವು ನಮ್ಮ ಆಟದಲ್ಲಿ ಸುಧಾರಣೆ ಕಂಡುಕೊಳ್ಳಲು ಯತ್ನಿಸುವೆವು. ಅದೇ ರೀತಿ ಎದುರಾಳಿ ತಂಡದ ಬಗ್ಗೆ ಅರಿತುಕೊಂಡು ಆಡುವೆವು, ಒಬ್ಬ ಕೋಚ್ ಆಗಿ ನನಗೆ ಯಾವುದು ಮುಖ್ಯವೆಂದರೆ ತಂಡ ಶೇ 100 ರಷ್ಟು ಆಡುವುದು. ನಮ್ಮ ತಂಡ ಆ ರೀತಿಯಲ್ಲಿ ಆಡಿದರೆ ಮೂರು ಅಂಕ ಕಟ್ಟಿಟ್ಟ ಬುತ್ತಿ," ಎಂದು ಲೊಬೆರಾ ಹೇಳಿದರು.
ಪ್ಲೇ ಆಫ್ ನ ಕೊನೆಯ ಎರಡು ಸ್ಥಾನಗಳಿಗೆ ನಡೆಯುತ್ತಿರುವ ಸ್ಪರ್ಧೆಯಲ್ಲಿ ಗೋವಾ ಇತರ ತಂಡಗಳೊಂದಿಗೆ ಸ್ಪರ್ಧಿಸುತ್ತಿದೆ. ಈ ಹಂತದಲ್ಲಿ ಏರಳಿತಗಳಾದರೆ ತಂಡದ ಮುನ್ನಡೆಗೆ ಅಡ್ಡಿಯಾಗಲಿದೆ ಎಂದು ಫರಾಂಡೊ ಅವರಿಗೆ ಚೆನ್ನಾಗಿ ಗೊತ್ತು. ಆದರೆ ಅವರು ತಮ್ಮ ತಂಡ ಒತ್ತಡದಲ್ಲಿದೆ ಎಂಬುದನ್ನು ತಳ್ಳಿಹಾಕಿದ್ದಾರೆ. " ಗೋವಾ ತಂಡಕ್ಕೆ ಪ್ರತಿಯೊಂದು ಪಂದ್ಯದಲ್ಲೂ ಒತ್ತಡ ಇದೆ. ಏಕೆಂದರೆ ನಮಗೆ ಸುಧಾರಣೆ ಕಂಡುಕೊಂಡು ಮೂರು ಅಂಕಗಳನ್ನು ಗಳಿಸಬೇಕಾಗಿದೆ. ಮುಂಬೈ ತಂಡಕ್ಕೆ ಒತ್ತಡ ಇದ್ದಿರಬಹುದು, ಅದಕ್ಕೆ ಚಾಂಪಿಯನ್ಷಿಪ್ ಗೆಲ್ಲುವುದೇ ಗುರಿಯಾಗಿದೆ. ನಮಗೆ ಪಂದ್ಯದಲ್ಲಿ ಸುಧಾರಣೆ ಕಂಡುಕೊಲ್ಳುವುದೇ ಗುರಿ, ಉತ್ತಮವಾಗಿ ಆಡಿ, ಉತ್ತಮವಾಇಗ ಯೋಜನೆ ಮಾಡಿಕೊಂಡು, ಉತ್ತಮ ರೀತಿಯಲ್ಲಿ ಮೂರು ಅಂಕಗಳನ್ನು ಗಳಿಸುವುದಾಗಿದೆ," ಎಂದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm