ಬ್ರೇಕಿಂಗ್ ನ್ಯೂಸ್
10-02-21 04:31 pm Source: MYKHEL Sadashiva ಕ್ರೀಡೆ
ಚೆನ್ನೈ: ಚೈನಾಮನ್ ಕುಲದೀಪ್ ಯಾದವ್ ಮತ್ತೆ ಟೀಮ್ ಇಂಡಿಯಾ ನಿರ್ವಹಣಾ ಸಮಿತಿಯಿಂದ ಕಡೆಗಣಿಸಲ್ಪಟ್ಟಿದ್ದಾರೆ ಎನ್ನಲಾಗಿದೆ. ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ನಲ್ಲಿ ಕುಲದೀಪ್ಗೆ ಅವಕಾಶ ಸಿಗಲಿದೆಯೇ ಎಂದು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆಯೇ ಸುಳ್ಳಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿರುವ ದ್ವಿತೀಯ ಟೆಸ್ಟ್ನಲ್ಲಿ ಬೌಲರ್ ಶಹಬಾಝ್ ನದೀಮ್ ಬದಲಿಗೆ ಅಕ್ಸರ್ ಪಟೇಲ್ ಅವರನ್ನು ಕರೆತರುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯೊಂದು ಹೇಳಿದೆ.
ಹೀಗಾಗಿ ಕುಲದೀಪ್ಗೆ ಮುಂದಿನ ಪಂದ್ಯದಲ್ಲೂ ಅವಕಾಶದ ಸಾಧ್ಯತೆ ಕಡಿಮೆಯಿದೆ. ಸ್ಪೋರ್ಟ್ಸ್ ಟುಡೇ ವರದಿಯ ಪ್ರಕಾರ, ಭಾರತದ ಅನುಭವಿ ಬೌಲರ್ ಅಕ್ಸರ್ ಪಟೇಲ್ ಚೇಪಕ್ ಸ್ಟೇಡಿಯಂನಲ್ಲಿ ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಒಂದು ವೇಳೆ ಅಕ್ಸರ್ ಸಂಪೂರ್ಣ ಫಿಟ್ ಆಗಿದ್ದರೆ ದ್ವಿತೀಯ ಟೆಸ್ಟ್ನಲ್ಲಿ ನದೀಮ್ ಬದಲು ಮೈದಾನಕ್ಕಿಳಿಯಲಿದ್ದಾರೆ.
ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನಲ್ಲಿ ಇಂಗ್ಲೆಂಡ್ 227 ರನ್ನಿಂದ ಗೆದ್ದಿತ್ತು. ದ್ವಿತೀಯ ಟೆಸ್ಟ್ ಫೆಬ್ರವರಿ 13ರಿಂದ ಆರಂಭಗೊಳ್ಳಲಿದೆ. ಬೌಲಿಂಗ್ ಆಲ್ ರೌಂಡರ್ ಅಕ್ಸರ್ ಪಟೇಲ್ ಭಾರತ ಪರ 38 ಏಕದಿನ ಪಂದ್ಯಗಳಲ್ಲಿ 181 ರನ್, 45 ವಿಕೆಟ್, 11 ಟಿ20ಐ ಪಂದ್ಯಗಳಲ್ಲಿ 68 ರನ್, 9 ವಿಕೆಟ್ ಪಡೆದಿದ್ದಾರೆ. ಕುಲದೀಪ್ 6 ಟೆಸ್ಟ್ ಪಂದ್ಯಗಳಲ್ಲಿ 24 ವಿಕೆಟ್, 61 ಏಕದಿನ ಪಂದ್ಯಗಳಲ್ಲಿ 105 ವಿಕೆಟ್ಗಳು, 20 ಟಿ20ಐ ಪಂದ್ಯಗಳಲ್ಲಿ 39 ವಿಕೆಟ್ ಪಡೆದಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm