ಬ್ರೇಕಿಂಗ್ ನ್ಯೂಸ್
11-02-21 01:47 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳಿಂದಲೂ ಹೊರಗುಳೀಯುವ ಸಾಧ್ಯತೆ ಕಂಡು ಬರುತ್ತಿದೆ. ಗಾಯದಿಂದಾಗಿ ಬೆರಳು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜಡೇಜಾ ಅವರ ಚೇತರಿಕೆಗೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಅಹ್ಮದಾಬಾದ್ನಲ್ಲಿ ನಡೆಯುವ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುವ ದೃಷ್ಟಿಯಲ್ಲಿ ರವೀಂದ್ರ ಜಡೇಜಾ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ಸಿಎ)ಯ ವೈದ್ಯಕೀಯ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೈ ಬೆರಳಿಗೆ ಕಾಯವಾಗಿತ್ತು. ಹೀಗಾಗಿ ಬ್ರಿಸ್ಬೇನ್ನಲ್ಲಿ ನಡೆದ ನಿರ್ಣಾಯ ಟೆಸ್ಟ್ ಪಂದ್ಯದಿಂದಲೂ ಅವರು ಹೊರಗುಳಿದಿದ್ದರು. ಆಸ್ಟ್ರೇಲಿಯಾದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿ ಭಾರತಕ್ಕೆ ಮರಳಿದ್ದರು ರವೀಂದ್ರ ಜಡೇಜಾ.
ರವೀಂದ್ರ ಜಡೇಜಾ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಲಭ್ಯತೆಯ ಬಗ್ಗೆ ಅನುಮಾನಗಳು ಉಳಿದಿರುವಂತೆಯೇ ಸೀಮಿತ ಓವರ್ಗಳ ಸರಣಿಯಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ಸ್ಪಷ್ಟತೆಯಿಲ್ಲ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಅಂತಿಮವಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ರವೀಂದ್ರ ಜಡೇಜಾ ಅವರ ಅಲಭ್ಯರಾಗುಗುವುದು ಖಚಿತವಾದರೆ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ತಂಡದ ಸಂಯೋಜನೆ ಕಠಿಣವೆನಿಸಲಿದೆ.
ಮೊದಲ ಪಂದ್ಯದಲ್ಲಿ ನದೀಮ್ ಅವಕಾಶವನ್ನು ಪಡೆದು ಎರಡು ಇನ್ನಿಂಗ್ಸ್ಗಳಲ್ಲಿ ನಾಲ್ಕು ವಿಕೆಟ್ ಪಡೆದರಾದರೂ ರನ್ ಬಿಟ್ಟುಕೊಡುವುದರಲ್ಲಿ ನಿಯಂತ್ರಣ ಸಾಧಿಸಲು ವಿಫಲರಾದರು. 3.8ರ ಸರಾಸರಿಯಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ರನ್ ಬಿಟ್ಟುಕೊಟ್ಟರೆ ಎರಡನೇ ಇನ್ನಿಂಗ್ಸ್ನಲ್ಲಿ 4.4ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟರು.
ಎರಡನೇ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದ್ದು ಟೀಮ್ ಇಂಡಿಯಾಗೆ ತಂಡದ ಆಯ್ಕೆ ಸವಾಲಾಗಿದೆ. ಮೊದಲ ಪಂದ್ಯದಲ್ಲಿನ ಸೋಲು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದ್ದರೆ ಇಂಗ್ಲೆಂಡ್ಗೆ ಸಹಜವಾಗಿಯೇ ಇದು ದೊಡ್ಡ ಉತ್ಸಾಹವನ್ನು ತುಂಬಿದೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am