ಬ್ರೇಕಿಂಗ್ ನ್ಯೂಸ್
11-02-21 01:47 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳಿಂದಲೂ ಹೊರಗುಳೀಯುವ ಸಾಧ್ಯತೆ ಕಂಡು ಬರುತ್ತಿದೆ. ಗಾಯದಿಂದಾಗಿ ಬೆರಳು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜಡೇಜಾ ಅವರ ಚೇತರಿಕೆಗೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಅಹ್ಮದಾಬಾದ್ನಲ್ಲಿ ನಡೆಯುವ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುವ ದೃಷ್ಟಿಯಲ್ಲಿ ರವೀಂದ್ರ ಜಡೇಜಾ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ಸಿಎ)ಯ ವೈದ್ಯಕೀಯ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೈ ಬೆರಳಿಗೆ ಕಾಯವಾಗಿತ್ತು. ಹೀಗಾಗಿ ಬ್ರಿಸ್ಬೇನ್ನಲ್ಲಿ ನಡೆದ ನಿರ್ಣಾಯ ಟೆಸ್ಟ್ ಪಂದ್ಯದಿಂದಲೂ ಅವರು ಹೊರಗುಳಿದಿದ್ದರು. ಆಸ್ಟ್ರೇಲಿಯಾದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿ ಭಾರತಕ್ಕೆ ಮರಳಿದ್ದರು ರವೀಂದ್ರ ಜಡೇಜಾ.
ರವೀಂದ್ರ ಜಡೇಜಾ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಲಭ್ಯತೆಯ ಬಗ್ಗೆ ಅನುಮಾನಗಳು ಉಳಿದಿರುವಂತೆಯೇ ಸೀಮಿತ ಓವರ್ಗಳ ಸರಣಿಯಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ಸ್ಪಷ್ಟತೆಯಿಲ್ಲ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಅಂತಿಮವಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ರವೀಂದ್ರ ಜಡೇಜಾ ಅವರ ಅಲಭ್ಯರಾಗುಗುವುದು ಖಚಿತವಾದರೆ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ತಂಡದ ಸಂಯೋಜನೆ ಕಠಿಣವೆನಿಸಲಿದೆ.
ಮೊದಲ ಪಂದ್ಯದಲ್ಲಿ ನದೀಮ್ ಅವಕಾಶವನ್ನು ಪಡೆದು ಎರಡು ಇನ್ನಿಂಗ್ಸ್ಗಳಲ್ಲಿ ನಾಲ್ಕು ವಿಕೆಟ್ ಪಡೆದರಾದರೂ ರನ್ ಬಿಟ್ಟುಕೊಡುವುದರಲ್ಲಿ ನಿಯಂತ್ರಣ ಸಾಧಿಸಲು ವಿಫಲರಾದರು. 3.8ರ ಸರಾಸರಿಯಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ರನ್ ಬಿಟ್ಟುಕೊಟ್ಟರೆ ಎರಡನೇ ಇನ್ನಿಂಗ್ಸ್ನಲ್ಲಿ 4.4ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟರು.
ಎರಡನೇ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದ್ದು ಟೀಮ್ ಇಂಡಿಯಾಗೆ ತಂಡದ ಆಯ್ಕೆ ಸವಾಲಾಗಿದೆ. ಮೊದಲ ಪಂದ್ಯದಲ್ಲಿನ ಸೋಲು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದ್ದರೆ ಇಂಗ್ಲೆಂಡ್ಗೆ ಸಹಜವಾಗಿಯೇ ಇದು ದೊಡ್ಡ ಉತ್ಸಾಹವನ್ನು ತುಂಬಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm