ಬ್ರೇಕಿಂಗ್ ನ್ಯೂಸ್
11-02-21 01:47 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳಿಂದಲೂ ಹೊರಗುಳೀಯುವ ಸಾಧ್ಯತೆ ಕಂಡು ಬರುತ್ತಿದೆ. ಗಾಯದಿಂದಾಗಿ ಬೆರಳು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜಡೇಜಾ ಅವರ ಚೇತರಿಕೆಗೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಅಹ್ಮದಾಬಾದ್ನಲ್ಲಿ ನಡೆಯುವ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುವ ದೃಷ್ಟಿಯಲ್ಲಿ ರವೀಂದ್ರ ಜಡೇಜಾ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ಸಿಎ)ಯ ವೈದ್ಯಕೀಯ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೈ ಬೆರಳಿಗೆ ಕಾಯವಾಗಿತ್ತು. ಹೀಗಾಗಿ ಬ್ರಿಸ್ಬೇನ್ನಲ್ಲಿ ನಡೆದ ನಿರ್ಣಾಯ ಟೆಸ್ಟ್ ಪಂದ್ಯದಿಂದಲೂ ಅವರು ಹೊರಗುಳಿದಿದ್ದರು. ಆಸ್ಟ್ರೇಲಿಯಾದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿ ಭಾರತಕ್ಕೆ ಮರಳಿದ್ದರು ರವೀಂದ್ರ ಜಡೇಜಾ.
ರವೀಂದ್ರ ಜಡೇಜಾ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಲಭ್ಯತೆಯ ಬಗ್ಗೆ ಅನುಮಾನಗಳು ಉಳಿದಿರುವಂತೆಯೇ ಸೀಮಿತ ಓವರ್ಗಳ ಸರಣಿಯಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ಸ್ಪಷ್ಟತೆಯಿಲ್ಲ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಅಂತಿಮವಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ರವೀಂದ್ರ ಜಡೇಜಾ ಅವರ ಅಲಭ್ಯರಾಗುಗುವುದು ಖಚಿತವಾದರೆ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ತಂಡದ ಸಂಯೋಜನೆ ಕಠಿಣವೆನಿಸಲಿದೆ.
ಮೊದಲ ಪಂದ್ಯದಲ್ಲಿ ನದೀಮ್ ಅವಕಾಶವನ್ನು ಪಡೆದು ಎರಡು ಇನ್ನಿಂಗ್ಸ್ಗಳಲ್ಲಿ ನಾಲ್ಕು ವಿಕೆಟ್ ಪಡೆದರಾದರೂ ರನ್ ಬಿಟ್ಟುಕೊಡುವುದರಲ್ಲಿ ನಿಯಂತ್ರಣ ಸಾಧಿಸಲು ವಿಫಲರಾದರು. 3.8ರ ಸರಾಸರಿಯಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ರನ್ ಬಿಟ್ಟುಕೊಟ್ಟರೆ ಎರಡನೇ ಇನ್ನಿಂಗ್ಸ್ನಲ್ಲಿ 4.4ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟರು.
ಎರಡನೇ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದ್ದು ಟೀಮ್ ಇಂಡಿಯಾಗೆ ತಂಡದ ಆಯ್ಕೆ ಸವಾಲಾಗಿದೆ. ಮೊದಲ ಪಂದ್ಯದಲ್ಲಿನ ಸೋಲು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದ್ದರೆ ಇಂಗ್ಲೆಂಡ್ಗೆ ಸಹಜವಾಗಿಯೇ ಇದು ದೊಡ್ಡ ಉತ್ಸಾಹವನ್ನು ತುಂಬಿದೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm