ಬ್ರೇಕಿಂಗ್ ನ್ಯೂಸ್
14-02-21 03:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಅನುಭವಿ ಬೌಲರ್ ಆರ್ ಅಶ್ವಿನ್ ಎದುರಾಳಿ ಇಂಗ್ಲೆಂಡ್ಗೆ ಕಂಟಕವಾಗಿದ್ದಾರೆ. ಅಶ್ವಿನ್ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ದಾಂಡಿಗರು ಪರದಾಡುತ್ತಿದ್ದಾರೆ. ಇಂಗ್ಲೆಂಡ್ ಕಳೆದುಕೊಂಡ ಮೊದಲ ಆರು ವಿಕೆಟ್ಗಳ ಪೈಕಿ ಮೂರು ಅಶ್ವಿನ್ ಪಾಲಾಗಿದೆ. ಈ ಮೂಲಕ ಅಶ್ವಿನ್ ತವರಿನಲ್ಲಿ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಆರ್ ಅಶ್ವಿನ್ ಆರಂಭಿಕ ಆಟಗಾರ ಡಾಮ್ ಸಿಬ್ಲಿ ಹಾಗೂ ಡೇನಿಯಲ್ ಲಾರೆನ್ಸ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ತವರಿನಲ್ಲಿ ಪಡೆದ ವಿಕೆಟ್ಗೆ ಸಮನಾದ ಸಾಧನೆಯನ್ನು ಮಾಡಿದರು. ನಂತರ ಭೋಜನ ವಿರಾಮ ಮುಗಿಸಿ ದಾಳಿಗಿಳಿದ ಅಶ್ವಿನ್ಗೆ ಬೆನ್ ಸ್ಟೋಕ್ಸ್ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಈ ಮೂಲಕ ತವರಿನಲ್ಲಿ 265 ವಿಕೆಟ್ ಕಬಳಿಸಿದ್ದ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ವಿಕೆ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮಾಜಿ ನಾಯಕ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. 62 ಟೆಸ್ಟ್ ಪಂದ್ಯಗಳಲ್ಲಿ ಅನಿಲ್ ಕುಂಬ್ಳೆ 350 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದರಲ್ಲಿ 25 ಐದು ವಿಕೆಟ್ಗಳ ಗೊಂಚಲು ಹಾಗೂ 7 10 ವಿಕೆಟ್ಗಳ ಗೊಂಚಲು ಇದೆ. ಭಾರತದಲ್ಲಿ ಆರ್ ಅಶ್ವಿನ್ 45 ಟೆಸ್ಟ್ ಪಂದ್ಯಗಳನ್ನು ಆಡಿದ್ದು 22.69ರ ಸರಾಸರಿಯಲ್ಲಿ 266 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 22 ಬಾರಿ 5 ವಿಕೆಟ್ಗಳ ಗೊಂಚಲು ಪಡೆದಿರುವ ಅಶ್ವಿನ್ 6 ಬಾರಿ 10 ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಸಂಪೂರ್ಣ ಹಿಡಿತವನ್ನು ಸಾಧಿಸಿದ್ದು ಇಂಗ್ಲೆಂಡ್ ತಂಡ 87 ರನ್ ಗಳಿಸಿದ ವೇಳೆ ತನ್ನ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೂಲಕ ಭಾರತ ಮೊದಲ ಟೆಸ್ಟ್ನ ಸೋಲಿಗೆ ಸರಿಯಾದ ತಿರುಗೇಟು ನೀಡುವ ಕಾತರದಲ್ಲಿದೆ.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm