ಬ್ರೇಕಿಂಗ್ ನ್ಯೂಸ್
14-02-21 03:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಅನುಭವಿ ಬೌಲರ್ ಆರ್ ಅಶ್ವಿನ್ ಎದುರಾಳಿ ಇಂಗ್ಲೆಂಡ್ಗೆ ಕಂಟಕವಾಗಿದ್ದಾರೆ. ಅಶ್ವಿನ್ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ದಾಂಡಿಗರು ಪರದಾಡುತ್ತಿದ್ದಾರೆ. ಇಂಗ್ಲೆಂಡ್ ಕಳೆದುಕೊಂಡ ಮೊದಲ ಆರು ವಿಕೆಟ್ಗಳ ಪೈಕಿ ಮೂರು ಅಶ್ವಿನ್ ಪಾಲಾಗಿದೆ. ಈ ಮೂಲಕ ಅಶ್ವಿನ್ ತವರಿನಲ್ಲಿ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಆರ್ ಅಶ್ವಿನ್ ಆರಂಭಿಕ ಆಟಗಾರ ಡಾಮ್ ಸಿಬ್ಲಿ ಹಾಗೂ ಡೇನಿಯಲ್ ಲಾರೆನ್ಸ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ತವರಿನಲ್ಲಿ ಪಡೆದ ವಿಕೆಟ್ಗೆ ಸಮನಾದ ಸಾಧನೆಯನ್ನು ಮಾಡಿದರು. ನಂತರ ಭೋಜನ ವಿರಾಮ ಮುಗಿಸಿ ದಾಳಿಗಿಳಿದ ಅಶ್ವಿನ್ಗೆ ಬೆನ್ ಸ್ಟೋಕ್ಸ್ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಈ ಮೂಲಕ ತವರಿನಲ್ಲಿ 265 ವಿಕೆಟ್ ಕಬಳಿಸಿದ್ದ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ವಿಕೆ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮಾಜಿ ನಾಯಕ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. 62 ಟೆಸ್ಟ್ ಪಂದ್ಯಗಳಲ್ಲಿ ಅನಿಲ್ ಕುಂಬ್ಳೆ 350 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದರಲ್ಲಿ 25 ಐದು ವಿಕೆಟ್ಗಳ ಗೊಂಚಲು ಹಾಗೂ 7 10 ವಿಕೆಟ್ಗಳ ಗೊಂಚಲು ಇದೆ. ಭಾರತದಲ್ಲಿ ಆರ್ ಅಶ್ವಿನ್ 45 ಟೆಸ್ಟ್ ಪಂದ್ಯಗಳನ್ನು ಆಡಿದ್ದು 22.69ರ ಸರಾಸರಿಯಲ್ಲಿ 266 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 22 ಬಾರಿ 5 ವಿಕೆಟ್ಗಳ ಗೊಂಚಲು ಪಡೆದಿರುವ ಅಶ್ವಿನ್ 6 ಬಾರಿ 10 ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಸಂಪೂರ್ಣ ಹಿಡಿತವನ್ನು ಸಾಧಿಸಿದ್ದು ಇಂಗ್ಲೆಂಡ್ ತಂಡ 87 ರನ್ ಗಳಿಸಿದ ವೇಳೆ ತನ್ನ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೂಲಕ ಭಾರತ ಮೊದಲ ಟೆಸ್ಟ್ನ ಸೋಲಿಗೆ ಸರಿಯಾದ ತಿರುಗೇಟು ನೀಡುವ ಕಾತರದಲ್ಲಿದೆ.
This News Article is a Copy of MYKHEL
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm